Latha Mangeshkar: ವಿರಕ್ತಮಠದಲ್ಲಿ ಲತಾ ಮಂಗೇಶ್ಕರ್ ಹುಟ್ಟುಹಬ್ಬ ಆಚರಣೆ

ದಾವಣಗೆರೆ: ವಿರಕ್ತಮಠದಲ್ಲಿ ಇಂದು ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ 92 ನೇ ಜನ್ಮದಿನವನ್ನು ಆಚರಿಸಲಾಯಿತು.
ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇವರ ವತಿಯಿಂದ ಆಚರಣೆ ಮಾಡಲಾಯಿತು.
ಬಸವಪ್ರಭು ಸ್ವಾಮೀಜಿ ಸಾನಿಧ್ಯವಹಿಸಿದ್ದರು . ಮೇಯರ್ ಎಸ್.ಟಿ. ವೀರೇಶ್, ಪಾಲಿಕೆಯ ಸದಸ್ಯರಾದ ಚಮನಸಾಬ್, ಸಂಸ್ಥೆಯ ಅಧ್ಯಕ್ಷ ಡಾ.ನಸೀರ್ ಅಹಮದ್, ಗೋಣೆಪ್ಪ ಇತರರು ಭಾಗವಹಿಸಿದ್ದರು.