ಕೊವಿಡ್ ಸೊಂಕಿನಿಂದ ಮೃತರಿಗೆ ಒಂದು ಲಕ್ಷ ಪರಿಹಾರ : ಅರ್ಜಿ ಅಹ್ವಾನಿಸಿದ ಸರ್ಕಾರ: ಪರಿಹಾರ ಪಡೆಯೋದು ಹೇಗೆ ಗೊತ್ತಾ.?

Screenshot_20210928-222552_Drive

ದಾವಣಗೆರೆ: ಕೋವಿಡ್ ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲು ಅರ್ಜಿಗಳನ್ನು ಪಡೆಯಲು ಸೂಚನೆ ನೀಡಲಾಗಿದೆ.

ಸಂತ್ರಸ್ಥ ಕುಟುಂಬದವರು, ಈ ಕುರಿತಂತೆ ಅರ್ಜಿಯನ್ನು ತಾಲ್ಲೂಕು ಕಚೇರಿಯಲ್ಲಿ ಅಥವಾ ತಮ್ಮ ವ್ಯಾಪ್ತಿಯ ನಾಡಕಚೇರಿಯಲ್ಲಿ ನಿಗದಿತ ನಮೂನೆ-1 ಅನ್ನು ಪಡೆದುಕೊಂಡು, ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ವ್ಯಾಪ್ತಿಯ ನಾಡಕಚೇರಿಯಲ್ಲಿ ಸಲ್ಲಿಸುವಂತೆ ಕೋರಿದ್ದು, ಈಗಾಗಲೇ ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಟರ್ಜಿ ಸಲ್ಲಿಸುವವರು ಕೋವಿಡ್-19 ಪಾಸಿಟಿವ್ ಅಥವಾ ನೆಗೆಟಿವ್ ರಿಪೋರ್ಟ್, ರೋಗಿ ಸಂಖ್ಯೆ ಪಿ-ನಂಬರ್, ಕ್ಲೀನಿಕಲ್ ರೇಡಿಯಾಲಜಿ ಮತ್ತು ಪ್ರಯೋಗಾಲಯ ವರದಿ ವೈದ್ಯರಿಂದ ದೃಢೀಕರಿಸಿರಬೇಕು, ಮೃತಪಟ್ಟ ವ್ಯಕ್ತಿಯ ಆಧಾರ್ ಕಾರ್ಡ್, ಮರಣ ಪ್ರಮಾಣ ಪತ್ರ, ಅರ್ಜಿದಾರರ ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನಮೂನೆ-2 ರಲ್ಲಿ ಸ್ವಯಂ ಘೋಷಣಾ ಪತ್ರ,‌ನಮೂನೆ-3 ರಲ್ಲಿ ಕುಟುಂಬ ಸದಸ್ಯರ ನಿರಾಕ್ಷೇಪಣಾ ಪತ್ರ ಸಲ್ಲಿಸಬೇಕೆಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!