ನ.25 ರಿಂದ 28 ರವರೆ ದಾವಣಗೆರೆಯಲ್ಲಿ ಎಸ್.ಎಸ್. ಡೈಮಂಡ್ ಹಾಗೂ ಶಿವಗಂಗಾ ಕಪ್ ಕ್ರಿಕೆಟ್ ಟೂರ್ನಮೆಂಟ್

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ದಿ. ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸವಿನೆನಪಿಗಾಗಿ ನ.೨೫ ರಿಂದ ೨೮ರವರೆಗೆ ನಗರದ ಪ್ರೌಢಶಾಲಾ ಮೈದಾನದಲ್ಲಿ ಎಸ್.ಎಸ್. ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್ ರಾಷ್ಟ್ರ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಟೂರ್ನಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.
ಈ ಕ್ರಿಕೇಟ್ ಟೂರ್ನಿಯಲ್ಲಿ ಕೇರಳ, ಚೈನೈ, ಮಧ್ಯಪ್ರರ್ದೇಶ, ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಬೆಂಗಳೂರು, ಮೈಸೂರು, ತುಮಕೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಜಿಲ್ಲೆ ೨೪ ತಂಡಗಳು ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ಈ ಟೂರ್ನಿಯಲ್ಲಿ ವಿಜೇತರಾದ ತಂಡಕ್ಕೆ ಪ್ರಥಮ ಬಹುಮಾನ ೩,೫೫,೫೫೫ ರೂ., ಹಾಗೂ ಶಾಮನೂರು ಡೈಮಂಡ್ ಕಪ್, ದ್ವಿತೀಯ ಬಹುಮಾನವಾಗಿ ೨,೫೫,೫೫೫ ರೂ., ಹಾಗೂ ಶಿವಗಂಗಾ ಕಪ್ ಮತ್ತು ತೃತೀಯ ಬಹುಮಾನ ೧,೨೫,೫೫೫ ರೂ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೇ ಉತ್ತಮ ಆಲ್ರೌಂಡರ್ಗೆ ಹೀರೋ ಹೋಂಡಾ ಬೈಕ್ ನೀಡಲಾಗುವುದು. ಹೊರ ರಾಜ್ಯ, ಜಿಲ್ಲೆಗಳಿಂದ ಬರುವ ಕ್ರೀಡಾಪಟುಗಳಿಗೆ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಪಂದ್ಯಾವಳಿಯು ಯ್ಯೂ ಟ್ಯೂಬ್ ನಲ್ಲಿ ನೇರಪ್ರಸಾರ ಮಾಡಲಾಗುವುದು. ವೀಕ್ಷಿಸಲು ಬಂದವರಿಗೆ ಪ್ರೇಕ್ಷಕರ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ ಅವರು, ಪಂದ್ಯಾವಳಿಗೆ ಅಂದಾಜು ೩೦ ಲಕ್ಷ ರೂ., ವೆಚ್ಚವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಶಿವಗಂಗಾ ಶ್ರೀನಿವಾಸ್, ಸಹ ಕಾರ್ಯದರ್ಶಿ ಜಯಪ್ರಕಾಶ್ ಗೌಡ, ಯುವರಾಜ್, ಸುರೇಶ್ ಪಾಟೀಲ್, ಚಂದ್ರು, ಆಕಾಶ್, ರಾಘವೇಂದ್ರ ಸೇರಿದಂತೆ ಮತ್ತಿತರರು ಇದ್ದರು.