ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ವಿನೂತನವಾಗಿ ಆಚರಣೆ

ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ವಿನೂತನವಾಗಿ ಆಚರಿಸಲಾಯಿತು.
ದಾವಣಗೆರೆ: ಜಗಜ್ಯೋತಿ ಬಸವೇಶ್ವರರ ಜಯಂತಿಯ ಪ್ರಯುಕ್ತ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರಾದ ದೇವರಮನಿ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಗರದ ಪಿಬಿ ರಸ್ತೆಯಲ್ಲಿರುವ ನಿರಾಶ್ರಿತ ಹಕ್ಕಿಪಿಕ್ಕಿ ಅಲೆಮಾರಿ ಜನಾಂಗದವರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವರಮನಿ ಶಿವಕುಮಾರ್ ಅವರು ಮಾತನಾಡಿ ಮಹಾಮಾರಿ ಕರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಬಸವ ಜಯಂತಿಯನ್ನು ರೇಶನ್ ಕಿಟ್ ಕೊಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶಿವನಗೌಡ ಟಿ ಪಾಟೀಲರವರು, ಜಯಪ್ರಕಾಶ್ ಮಾಗಿ, ಟಿಂಕರ್ ಮಂಜಣ್ಣ, ಶಿವಾನಂದ ಬೆನ್ನೂರ್, ಶ್ರೀಕಾಂತ ನೀಲಗುಂದ, ಅಭಿಷೇಕ ಪಿ ಎಳೆಹೊಳೆ ಉಪಸ್ಥಿತರಿದ್ದರು.