ಬೇಡಿಕೆ ಈಡೇರದಿದ್ದರೆ ಬೇಡರ ಕಿವಿಯಲ್ಲಿ ಕಮಲ; ಪ್ರತಿಭಟನೆ ಎಚ್ಚರಿಕೆ

ಬೇಡಿಕೆ ಈಡೇರದಿದ್ದರೆ ಬೇಡರ ಕಿವಿಯಲ್ಲಿ ಕಮಲ; ಪ್ರತಿಭಟನೆ ಎಚ್ಚರಿಕೆ

ದಾವಣಗೆರೆ: ನಾಯಕ ಸಮುದಾಯ ಬೇಡಿಕೆ ಈಡೇರಿಸದಿದ್ದಲ್ಲಿ ಮಾ.25 ರಂದು ಡಾ. ಬಿ.ಆರ್.ಅಂಬೇಡ್ಕರ್ ವೃತ್ತ ಹಾಗೂ ವೀರ ಮದಕರಿ ನಾಯಕ ವೃತ್ತದಲ್ಲಿ ‘ಬೇಡರ ಕಿವಿಯಲ್ಲಿ ಕಮಲ’ ಎಂಬ ಘೋಷ ವಾಕ್ಯದೊಂದಿಗೆ ವಿನೂತನ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಮಾಜ ಎಚ್ಚರಿಕೆ ನೀಡಿದೆ.
ಹಿಂದಿನ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಚಿತ್ರದುರ್ಗದಲ್ಲಿ ಮದಕರಿ ನಾಯಕರ 100 ಕೋಟಿ ವೆಚ್ಚದ ಥೀಮ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಕೊಟ್ಟ ಭರವಸೆ ಈಡೇರಿಸಿಲ್ಲ‌. ಅದೇ ರೀತಿ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿಸ್ಥಾನ ಕೊಡುವುದಾಗಿ ಸಿದ್ಧರಾಮಯ್ಯ ವಿರುದ್ಧ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಕೊಟ್ಟ ಮಾತಿನಂತೆ ಬಿಜೆಪಿ ನಡೆದುಕೊಂಡಿಲ್ಲ. ಶೀಘ್ರವಾಗಿ ಮದಕರಿನಾಯಕರ ಥೀಮ್ ಪಾರ್ಕ್ ನಿರ್ಮಾಣ ಹಾಗೂ ಶ್ರೀರಾಮುಲು ಅವರಿಗೆ ದೊಡ್ಡ ಹುದ್ದೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆಯ ದಾರಿ ಹಿಡಿಯಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಪಿ.ಬಿ. ಅಂಜುಕುಮಾರ್ ಮತ್ತು ನಾಯಕ ಸಮುದಾಯದ ಯುವ ಮುಖಂಡ ದೇವರಾಜ್ ಕಾಟೇಹಳ್ಳಿ ಅವರು ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!