ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿ ಪತ್ನಿಯ ಕಣ್ಣೆದುರಿನಲ್ಲೇ ನೀರಿನಲ್ಲಿ ಮುಳುಗಿ ಸಾವು
![](https://garudavoice.com/wp-content/uploads/2024/03/death.jpg)
ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ.
ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಇವರು ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯೊಂದಿಗೆ ತೋಟದ ಕೆರೆಗೆ ನೀರು ತರಲೆಂದು ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ .
ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.