ಹಿಂಬದಿಯಿಂದ ಬಂದ ಟಿಪ್ಪರ್, ಬೈಕ್ ಗೆ ಡಿಕ್ಕಿ: ಇಬ್ಬರು ಮೃತ್ಯು

ಹರಿಹರ: ಮಣ್ಣು ಸಾಗಣೆಯ ಟಿಪ್ಪ‌ರ್ ಮತ್ತು ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಹನಗವಾಡಿ ಕ್ರಾಸ್ ಬಳಿಯ ಉಡುಪಿ ಹೋಟೆಲ್ ಬಳಿ ಶನಿವಾರ ನಡೆದಿದೆ.

ದಾವಣಗೆರೆ ತಾಲ್ಲೂಕಿನ ಹಳೆಬಾತಿ ಗುಡ್ಡದ ಕ್ಯಾಂಪ್ ನಿವಾಸಿಗಳಾದ ತರಗಾರ ಮೇಸ್ತ್ರಿ ಆಕಾಶ್ (22) ಹಾಗೂ ರಾಕೇಶ್ (22) ಮೃತರು.

ಹರಿಹರ ತಾಲ್ಲೂಕಿನ ಹಲಸಬಾಳು ಗ್ರಾಮಕ್ಕೆ ಕೆಲಸದ ನಿಮಿತ್ತ ಹೋಗಿ ಬರುವುದಾಗಿ ಹೇಳಿ ಇಬ್ಬರು ಬೈಕಿನಲ್ಲಿ ತೆರಳಿದ್ದರು. ಹೆದ್ದಾರಿಯಲ್ಲಿ ಸಾಗುವಾಗ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದು  ಇವರ ಮೇಲೆ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮರಣ ಹೊಂದಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!