ಆರ್.ಟಿ.ಐ ಕಾರ್ಯಕರ್ತ ಹತ್ಯೆ ಆರೋಪಿ ಪಿಡಿಒ ಎ.ಟಿ. ನಾಗರಾಜ್ ನ್ಯಾಯಾಲಯದಲ್ಲಿ ಶರಣಾಗತಿ

ದಾವಣಗೆರೆ: ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಕನ್ನಡ ಪರ ಹೋರಾಟಗಾರ ಹಾಗೂ ಆರ್.ಟಿ.ಐ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಡಿಒ ಎ.ಟಿ. ನಾಗರಾಜ್ ಗುರುವಾರ ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಗೆ ಶರಣಾಗಿದ್ದಾನೆ.

ಶನಿವಾರ ಪಿಡಿಒ ನಾಗರಾಜ್ ಕುಮ್ಮಕ್ಕಿನಿಂದ ರಾಮಕೃಷ್ಣ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿ
ಕೊಲೆ ಮಾಡಲಾಗಿತ್ತು.
ಎ.ಟಿ. ನಾಗರಾಜ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕೊಲೆ ಮೊಕದ್ದಮೆಯಲ್ಲಿ ಪಿಡಿಒ ಎಟಿ ನಾಗರಾಜ್ ಸೇರಿದಂತೆ ಮೂವರು ನ್ಯಾಯಾಂಗ ಬಂಧನದಲ್ಲಿದ್ದು, ಉಳಿದ 8 ಮಂದಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹತ್ಯೆಯಾದ ಆರ್.ಟಿ.ಐ ಕಾರ್ಯಕರ್ತ ರಾಮಕೃಷ್ಣ
ಸ್ಥಳೀಯ ಪಿಡಿಓ ಭ್ರಷ್ಟಾಚಾರ ವಿರುದ್ದ ಹೋರಾಟ ಮಾಡುತ್ತಿದ್ದ, ಇದೇ ದ್ವೇಷಕ್ಕೆ ಕೊಲೆಯಾಗಿದೆ ಎಂದು ಕುಟುಂಬಸ್ಥರು ಜಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಎ1 ಆರೋಪಿ ಪಿಡಿಒ ಎ.ಟಿ. ನಾಗರಾಜ್ ಜಲ್ಲಾ ನ್ಯಾಯಾಲಯಕ್ಕೆ ಖುದ್ದಾಗಿ ಸರೆಂಡರ್‌ ಅಗಿದ್ದನೆ.

Leave a Reply

Your email address will not be published. Required fields are marked *

error: Content is protected !!