ಪಠ್ಯಕ್ರಮದಲ್ಲಿ ವೀರ ಮಹಿಳೆಯರ ಪಾಠ ಅಳವಡಿಕೆಗೆ ಕ್ರಮ: ಸಿಎಂ

19

ಹುಬ್ಬಳ್ಳಿ : ಶಾಲಾ ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಳವಡಿ ಮಲ್ಲಮ್ಮ ಮರಾಠ ಸೈನ್ಯದ ವಿರುದ್ಧ ಜಯಗಳಿಸಿದ 374ನೇ ವರ್ಷಾಚರಣೆಗೆ ಚಾಲನೆ ನೀಡಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದಾರೆ. ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮ, ಕಿತ್ತೂರು ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು. ಜೊತೆಗೆ ಬೆಳವಡಿಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ನಿನ್ನೆ ಕೆಳದಿ ಚನ್ನಮ್ಮನ ಪಟ್ಟಾಭಿಷೇಕದ 350ನೇ ವರ್ಷದ ಆಚರಣೆಯನ್ನೂ ಮಾಡಿದ್ದೇವೆ. ಕರ್ನಾಟಕಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ. ಅದು ಇಂದಿನ ಪೀಳಿಗೆಗೆ ತಿಳಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಮೊದಲುಗೊಂಡು ಮಹಿಳೆಯರ ಪಾತ್ರವನ್ನು ಪ್ರಮುಖವಾಗಿ ಯುವಜನಾಂಗಕ್ಕೆ ತಿಳಿಸುವ ಕೆಲಸವಾಗಬೇಕು. ಮುಂದಿನ ವರ್ಷ ಬೆಳವಡಿಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು. ಈ ಸಂಸ್ಥಾನ ಬೆಳೆದು ಬಂದ ರೀತಿ, ಶಿವಾಜಿ ಮಹಾರಾಜರ ವಿರುದ್ಧ ಅವರ ಹೋರಾಟದ ಬಗ್ಗೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳಿಗೆ ಅಪಾರ ಜ್ಞಾನವಿದೆ. ಅವರ ಕಳಕಳಿ, ನಾಡಿನ ಬಗ್ಗೆ ಅವರ ಪ್ರೀತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಅಭಿನಂದಿಸಿದರು.ಪ್ರತಿವರ್ಷ ಜಾಗತಿಕವಾಗಿ ಮಾರ್ಚ್ 8 ಅನ್ನು ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ವೃತ್ತಿಪರ ಪರಿಸರದಲ್ಲಿ ಅವರು ಎದುರಿಸುತ್ತಿರುವ ದಿನನಿತ್ಯದ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಾ, ಎಲ್ಲಾ ಹಂತದ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಈ ದಿನ ಆಚರಿಸುತ್ತದೆ. ಮಾರ್ಚ್ 8ರಂದು ಜಗತ್ತಿನ ಮೂಲೆ ಮೂಲೆಯ ಮಹಿಳೆಯರು ಒಟ್ಟಿಗೆ ಸೇರುತ್ತಾರೆ, ಇದು ಲಿಂಗ ಸಮಾನತೆಯನ್ನು ವೇಗಗೊಳಿಸುವ ಕ್ರಿಯೆಯ ಕರೆಯಾಗಿದೆ. ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್, ಶಾಸಕ ಅರುಣ್ ಶಾಹಪುರ, ಮಾಜಿ ಶಾಸಕ ಮೋಹನ್ ಲಿಂಬಿಕಾಯಿ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!