“ಸಂಘದ ಬಗ್ಗೆ ಮಾತನಾಡುವ ಮುನ್ನ ಅದರ ನಿಸ್ವಾರ್ಥ ಗುಣ ಅರಿಯಿರಿ” : ಟ್ವಿಟರ್‌ನಲ್ಲಿ ಆರ್‌ಎಸ್‌ಎಸ್ ಗುಣಗಾನ ಮಾಡಿದ ನಟ ಜಗ್ಗೇಶ್

IMG-20211006-WA0036
ಬೆಂಗಳೂರು : ‘ ಸಂಘದ ಬಗ್ಗೆ ಮಾತನಾಡುವ ಮುನ್ನ ಅದರ ನಿಸ್ವಾರ್ಥ ಗುಣ ಅರಿಯಿರಿ ‘ ಎಂದು ನಟ ಜಗ್ಗೇಶ್ ಟ್ವಿಟರ್‌ನಲ್ಲಿ ಆರ್‌ಎಸ್‌ಎಸ್ ಗುಣಗಾನ ಮಾಡಿದ್ದಾರೆ .
ಆ ಸಂಸ್ಥೆಯ ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ . ದೂರನಿಂತು ಬೆಟ್ಟ ನೋಡುವರಿಗೂ , ಆ ಬೆಟ್ಟ ಏರಿದವರಿಗೂ ವಿವರಣೆಗೆ ವ್ಯತಾಸವುಂಟು ! ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು ಕಾರಣ ಅದರ ಮಾತೃರೂಪ ಹಾಗು ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥ ಸಂಘವಿದು ‘ ಎಂದು ಹೇಳಿದ್ದಾರೆ . ‘ ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿಧ್ಯಾವಂತರು ರಾಷ್ಟ್ರಪ್ರೇಮಿಗಳು , ಆತ್ಮ ಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು . ಅವರಿಗೆ ದೇಶವೇ ಮನೆ , ದೇಶವಾಸಿಗಳೇ ಬಂಧುಗಳು . ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ . ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ ‘ ಎಂದು ಹೇಳಿದ್ದಾರೆ .
ಇತ್ತೀಚೆಗೆ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕೆಲ ರಾಜಕೀಯ ನಾಯಕರು ಆರ್‌ಎಸ್ಎಸ್ ಬಗ್ಗೆ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ ಜಗ್ಗೇಶ್ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ . ಸರಣಿ ಟ್ವಿಟ್ ಮಾಡಿರುವ ಅವರು , ‘ ನಾನು ಕಂಡ ಆರ್‌ಎಸ್ಎಸ್ ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ . ಕೊರೊನಾ ಸಂದರ್ಭವಾಗಲಿ , ನೆರೆ ಬಂದ ಸಂದರ್ಭವಾಗಲಿ , ರಾಷ್ಟ್ರಕ್ಕೆ ಸಂಕಷ್ಟ ಬಂದಾಗಲೂ ಆಗಲಿ , ವಿದ್ಯೆ ದಾನಕ್ಕಾಗಲಿ , ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ . ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥ ಸೇವೆ ಮಾಡುವ ಮಾತೃ ಹೃದಯಿ ಸಂಸ್ಥೆ ಎಂದರೆ ಅದು ಆರ್‌ಎಸ್‌ಎಸ್ ಒಂದೆ ‘ ಎಂದು ಜಗ್ಗೇಶ್ ಹೇಳಿದ್ದಾರೆ .

Leave a Reply

Your email address will not be published. Required fields are marked *

error: Content is protected !!