ಇಂದು ದಾವಣಗೆರೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬೆಂಗಳೂರು: ಅಲೋಕ್ ಕುಮಾರ್ ಐಪಿಎಸ್, ಎಡಿಜಿಪಿ ಕಾ & ಸು ರವರು ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಗೆ ಇಂದು ಬೇಟಿ ನೀಡಲಿದ್ದಾರೆ.
ಇಂದು ಸಂಜೆ 05.30 ಗಂಟೆಗೆ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಜಿಲ್ಲಾ ಎಸ್ ಪಿ ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚೆ(interaction) ನಡೆಸಲಿದ್ದಾರೆ.
ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಪೂರ್ವ ವಲಯದ ಪೊಲೀಸ್ ಜಿಲ್ಲಾ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಹಾಗೇ ಅಯಾ ಜಿಲ್ಲಾ ಎಸ್ ಪಿ ಕಚೇರಿಗಳಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುತ್ತಾರೆ. ಸ್ವತಃ ಅಲೋಕ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಪೊಲೀಸ್ ಇಲಾಖೆಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ಹೊಂದಿರುವ ನಾಗರಿಕರು ಭೇಟಿ ಮಾಡಬಹುದು.
ನಾಳೆ ಜುಲೈ 7 ಶಿವಮೊಗ್ಗ ಎಸ್ಪಿ ಕಚೇರಿಯಲ್ಲಿ ಮಧ್ಯಾಹ್ನ 1.30.
ಜುಲೈ 7 ರಂದು ದಾವಣಗೆರೆ ಎಸ್ ಪಿ ಕಛೇರಿಯಲ್ಲಿ ಸಂಜೆ 5.30