ಕೃಷಿ ಹಾಗೂ ತೋಟಗಾರಿಕಾ ಕಚೇರಿಗೆ ಭೇಟಿ ನೀಡಿದ ರೇಣುಕಾಚಾರ್ಯ,ರೈತರಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ತಾಕೀತು
![](https://garudavoice.com/wp-content/uploads/2021/06/Renukacharya-visit-agriculture-office.jpg)
ದಾವಣಗೆರೆ: ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು ರೈತ ಬಾಂಧವರು ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಕೃಷಿ ಇಲಾಖೆಯು ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಸರ್ಕಾರ ನಿಗದಿ ಪಡಿಸಿರುವ ದರದಲ್ಲಿ ಸಮರ್ಪಕವಾಗಿ ಗೊಬ್ಬರ ಕೃಷಿ ಅಧಿಕಾರಿಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೂಚಿಸಿದರು.
ಹೊನ್ನಾಳಿ ಪಟ್ಟದ ಕೃಷಿ ಇಲಾಖೆಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರೈತ ದೇಶದ ಬೆನ್ನೆಲುಬು. ಅವರಿಗೆ ಸರಿಯಾಗಿ ಗೊಬ್ಬರ, ಬೀಜ ಸಿಗುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.ರೈತರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ಕೆಲಸ ನಿರತವಹಿಸಿ, ಹಾಗೂ ಅವರನ್ನು ಕಚೇರಿಯಲ್ಲಿ ಕಾಯಿಸದೆ, ತಕ್ಷಣ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೇಂದ್ರ ಸರ್ಕಾರ ರೈತ ಬಾಂಧರ ಅನುಕೂಲಕ್ಕಾಗಿ ಗೊಬ್ಬರಗಳಿಗೆ ಸಬ್ಸಿಡಿ ನೀಡಿದ್ದು, ತಾಲೂಕಿನಾದ್ಯಂತ ಗೊಬ್ಬರದ ಅಂಗಡಿಗಳಲ್ಲಿ ವರ್ತಕರು ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.