ಕಾಂಗ್ರೆಸ್ ಪಕ್ಷ ಸಂಘಟನೆ ಬಗ್ಗೆ ದಾವಣಗೆರೆಯಲ್ಲಿ ಎಸ್ ಎಸ್ ರೊಂದಿಗೆ ಎಐಸಿಸಿ ಕಾರ್ಯದರ್ಶಿ ಚರ್ಚೆ

IMG-20220807-WA0023

ದಾವಣಗೆರೆ: ಕಾಂಗ್ರೆಸ್ ಪಕ್ಷದ ಸಂಘಟನೆ ಕುರಿತಂತೆ ಹಾಗೂ 75ನೇ ಸ್ವಾಂತಂತ್ರೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ನಡಿಗೆ ಕಾರ್ಯಕ್ರಮ ಯಶಸ್ವಿ ಬಗ್ಗೆ ದಾವಣಗೆರೆ ಜಿಲ್ಲಾ ಮಾಜಿ ಸಚಿವರು, ಹಾಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಎಐಸಿಸಿ ಕಾರ್ಯದರ್ಶಿಗಳು, ಕರ್ನಾಟಕ ಉಸ್ತುವಾರಿ ಮಯೂರ್ ಜಯ ಕುಮಾರ್ ಅವರು ಇಂದು ಚರ್ಚೆ ನಡೆಸಿದರು.

ಚರ್ಚೆ ವೇಳೆ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಂಘಟನೆ ಹೊಂದಿದ್ದು ಇನ್ನಷ್ಟು ಪಕ್ಷ ಸಂಘಟನೆ ಹಾಗೂ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಿದರು.

ಜೊತೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನತೆಯ ಬಳಿಗೆ ತಲುಪಿಸುವುದು ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಕುರಿತು ಸಹ ಉಭಯ ನಾಯಕರು ಮಾತುಕತೆ ನಡೆಸಿದರು.

ಈಗಾಗಲೇ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ನಡಿಗೆ ಕಾರ್ಯಕ್ರಮ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಎಸ್. ಮಲ್ಲಿಕಾರ್ಜುನ್ , ಎ. ನಾಗರಾಜ್ , ರೇವಣಸಿದ್ದಪ್ಪ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!