ಲಾಟರಿ ಮೂಲಕ ಪಾಲಿಕೆ ಪೌರ ಕಾರ್ಮಿಕರಿಗೆ ವಸತಿಗೃಹ ಹಂಚಿಕೆ

ಲಾಟರಿ ಮೂಲಕ ಪಾಲಿಕೆ ಪೌರ ಕಾರ್ಮಿಕರಿಗೆ ವಸತಿಗೃಹ ಹಂಚಿಕೆ

ದಾವಣಗೆರೆ: ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಭಾನುವಾರ ಪೌರ ಕಾರ್ಮಿಕರಿಗೆ ವಸತಿ ಗೃಹಗಳನ್ನು ಹಂಚಿಕೆ ಮಾಡಲಾಯಿತು.

ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಅಡಿ ನಿರ್ಮಿಸಲಾಗಿರುವ 381 ವಸತಿ ಗೃಹಗಳನ್ನು ಫಲಾನುಭವಿ ಪೌರಕಾರ್ಮಿಕರಿಗೆ ಲಾಟರಿ ಮೂಲಕ ಹಂಚಿಕೆ ಮಾಡುವ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ನಡೆಯಿತು.

ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಉಪ ಮೇಯರ್ ಯಶೋಧ ಯಗ್ಗಪ್ಪ, ಆಯುಕ್ತರಾದ ಶ್ರೀಮತಿ ರೇಣುಕಾ, ಮಾಜಿ ಮೇಯರ್ ಎಸ್. ಟಿ. ವೀರೇಶ್, ಸದಸ್ಯರಾದ ಚಮನ್ ಸಾಬ್, ಎಲ್. ಡಿ. ಗೋಣೆಪ್ಪ, ಸೋಗಿ ಶಾಂತಕುಮಾರ್, ಗಾಯತ್ರಿಬಾಯಿ, ಉದಯ್ ಕುಮಾರ್ ಮತ್ತು ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!