ಅನುದಾನದ ಕೊರತೆಯಿಂದ 8ನೇ ತರಗತಿಯ ಮಕ್ಕಳಿಗೆ ಈ ವರ್ಷವೂ ಸೈಕಲ್ ಭಾಗ್ಯ ಇಲ್ಲ

IMG-20210829-WA0020

ಬೆಂಗಳೂರು: ರಾಜ್ಯ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಸೈಕಲ್ ಭಾಗ್ಯವಿಲ್ಲ ಹಣಕಾಸು ಕೊರತೆ ಹಿನ್ನೆಲೆಯ ಸತತ ಎರಡು ವರ್ಷವೂ ಉಚಿತ ಸೈಕಲ್ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಳೆದ ಎರಡು ವರ್ಷದಿಂದ ಕಾಡುತ್ತಿರುವ ಕೋವಿಡ್ ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೆ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ 2006-07 ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಕಾಲದಿಂದ ಜಾರಿಯಲ್ಲಿದ್ದ 8ನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್ ಯೋಜನೆಯನ್ನು ಸರ್ಕಾರ 2020 21 ಸಾಲಿನಲ್ಲಿ ಸ್ಥಗಿತಗೊಳಿಸಿತ್ತು. ಅನುದಾನದ ಕೊರತೆ ಇದ್ದರೂ ಮಕ್ಕಳಿಗೆ ಸೈಕಲ್ ಯೋಜನೆ ನಿಲ್ಲಬಾರದೆಂದು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದರು.

ಆದರೂ ಯೋಜನೆ ಜಾರಿಯಾಗಲಿಲ್ಲ ಇದೀಗ 2021 22 ಸಾಲಿನಲ್ಲಿ ಅನುದಾನದ ಕೊರತೆ ಕಾರಣದಿಂದ ಮಕ್ಕಳಿಗೆ ಸೈಕಲ್ ನೀಡದಿರಲು ತೀರ್ಮಾನಿಸಲಾಗಿದೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!