application; ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಆ. 25: 2023 24 ನೇ ಸಾಲಿನ ಹಿಂದುಳಿದ ವರ್ಗಗಳ ಆರ್ಯವೈಶ್ಯ ಸಮುದಾಯ ಹಾಗೂ ಇತರ ಉಪ ಸಮುದಾಯದವರಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ (application) ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆ, ಆಹಾರ ವಾಹಿನಿ ಯೋಜನೆ, ವಾಸವಿ ಜಲ ಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಅರ್ಹ ಮತ್ತು ಅರ್ಹ ಅಭ್ಯರ್ಥಿಗಳು https://kacdc.karnataka.gov.in   ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ 18 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ಸಹಾಯವಾಣಿ ಸಂ. 08192 230934 ಗೆ ಸಂಪರ್ಕಿಸಲು ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ನಿರ್ದೇಶಕ ದೀಪಶ್ರೀ .ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!