ಆರ್ ಟಿಐ ಕಾರ್ಯಕರ್ತನ ವಿರುದ್ಧ ಸುಳ್ಳು ಪ್ರಕರಣ ದಾಖಲು ಆರೋಪ

ಸುಳ್ಳು ಪ್ರಕರಣ

ದಾವಣಗೆರೆ: ಕಾನೂನು ದುರ್ಬಳಕೆ ಮಾಡಿಕೊಂಡು ಮಾಹಿತಿ ಹಕ್ಕು ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಸುಳ್ಳು ದೂರು ನೀಡಿರುವವರ ವಿರುದ್ಧ ಕ್ರಮಕ್ಕೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಒತ್ತಾಯಿಸಿದೆ.
ವೇದಿಕೆಯ ಕಾರ್ಯಕರ್ತನಾದ ಶ್ರೇಯಸ್ ಎಂಬುವರ ವಿರುದ್ಧ ಗ್ಲೋಬಲ್ ಶಾಲೆಯ ಮುಖ್ಯಸ್ಥರು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಕಳೆದ ನ.26 ಸುಳ್ಳು ಪ್ರಕರಣ ದಾಖಲು ಮಾಡಿ ಮಾನಹಾನಿ ಮಾಡಿದ್ದಾರೆಂದು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜು ಆರೋಪಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತರಾದ ಶ್ರೇಯಸ್ ಇವರು 2 ತಿಂಗಳ ಕಾಲ ಅನಗತ್ಯ ಮಾನಸಿಕ ಹಿಂಸೆಯನ್ನು ಅನುಭವಿಸಿದ್ದು ಹಾಗೂ ಆರ್ಥಿಕವಾಗಿ ಪ್ರಬಲರಿಲ್ಲದ ಕಾರಣ ಕುಟುಂಬ ನಿರ್ವಹಣೆಗೆ ತೊಂದರೆ ಉಂಟಾಗಿದೆ. ಸಾಮಾಜಿಕವಾಗಿ ಮಾನಹಾನಿ ಆಗಿರುವುದರಿಂದ ಕೂಲಂಕುಷವಾಗಿ ಪರಿಶೀಲಿಸಿ  ನ್ಯಾಯ ದೊರಕಿಸಿಕೊಡಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!