ದಾವಣಗೆರೆಯ ವಾರ್ತಾ ಇಲಾಖೆಯ ಅಶೋಕ್ ಕುಮಾರ್ ಅವರಿಗೆ ಮುಂಬಡ್ತಿ

ದಾವಣಗೆರೆ: ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಅಶೋಕ್ ಕುಮಾರ್ ಸೇರಿದಂತೆ ರಾಜ್ಯದ ಏಳು ಅಧಿಕಾರಿಗಳಿಗೆ ಹಿರಿಯ ಶ್ರೇಣಿಯ ಎ ಗ್ರೇಡ್ ಉಪ ನಿರ್ದೇಶಕರಾಗಿ ಮುಂಬಡ್ತಿ ನೀಡಿ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೋರಡಿಸಿದ್ದಾರೆ. ಆಶೋಕ್ ಕುಮಾರ್ ಅವರಿಗೆ ದಾವಣಗೆರೆ ಜಿಲ್ಲೆಯ ಹಿರಿಯ ಹಾಗೂ ಕಿರಿಯ ಪತ್ರಕರ್ತರು, ಛಾಯಾಗ್ರಾಹಕರು, ಶುಭಾಶಯ ಕೋರಿದ್ದಾರೆ.