ತಮಿಳುನಾಡಿನ ಈರೋಡ್ ನಲ್ಲಿ ಬಸವ ಸಭಾಭವನದ ಭೂಮಿ ಪೂಜೆ ನೆರವೇರಿಸಿದ ಶಾಮನೂರು ಶಿವಶಂಕರಪ್ಪ

ತಮಿಳುನಾಡು: ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ತಾಳವಾಡಿ ನಗರದಲ್ಲಿ ಯಲ್ಲಿ ಬಸವ ಸಮಿತಿ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ಲಿಂಗಾಯತ ಯುವ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಸಭಾಭವನಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರು ಭೂಮಿ ಪೂಜೆ ನೆರವೇರಿಸಿದರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹರಗುರು ಚರಮೂರ್ತಿಗಳು, ತಮಿಳುನಾಡು ಮಾಜಿ ಸಚಿವರಾದ ಪೆರಿಯ ಸ್ವಾಮಿ, ಹೆಚ್. ಎಂ.ಗಣೇಶ್ ಪ್ರಸಾದ್, ಜಯವಿಭವಸ್ವಾಮಿ, ಮಲೆ ಮಾದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಕನ್ನಡ ಗಡಿನಾಡು ಪ್ರಾಧಿಕಾರದ ಅಧ್ಯಕ್ಷರಾದ ಸಿ. ಸೋಮಶೇಖರ್, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಉಪಾಧ್ಯಕ್ಷರುಗಳಾದ ಅಥಣಿ ವೀರಣ್ಣನವರು, ಅಣಬೇರು ರಾಜಣ್ಣ,ತಮಿಳುನಾಡು ರಾಜ್ಯ ಹಾಗೂ ತಾಳವಾಡಿಯ ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ಲಿಂಗಾಯಿತ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.