ಅಟ್ರಾಸಿಟಿ ಕೇಸ್ ದಾಖಲಿಸದೆ ಇದಲ್ಲಿ ಉಗ್ರ ಹೋರಾಟ: ದಲಿತ ಸೇನೆ ರಾಜ್ಯಾಧ್ಯಕ್ಷ ಹನುಮಂತಪ್ಪ.ಜಿ

ದಾವಣಗೆರೆ: ದಾವಣಗೆರೆಯಲ್ಲಿ ಕೊಲೆಯಾದ ಪರಮೇಶ್ವರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಹದಿನೈದು ದಿನದೊಳಗಾಗಿ ಅಟ್ರಾಸಿಟಿ ಕೇಸ್ ದಾಖಲು ಮಾಡಿಕೊಳ್ಳದಿದ್ದಲ್ಲಿ ಎಸ್ಪಿ ವರ್ಗಾವಣೆಗೆ ಒತ್ತಾಯಿಸಿ ಹಾಗೂ ಕರ್ತವ್ಯ ಲೋಪದ ಅಡಿಯಲ್ಲಿ ಡಿಎಸ್ ಪಿ ಅಮಾನತುಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ದಲಿತಸೇನೆ ಪ್ರತಿಭಟನೆ ನಡೆಸಲಿದೆ ಎಂದು ರಾಜ್ಯಾಧ್ಯಕ್ಷ ಹನುಮಂತ ಜಿ ಯಳಸಂಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಮುಂದುವರೆದು ಮಾತನಾಡಿದ ಅವರು, ದಾವಣಗೆರೆಯಲ್ಲಿ ಬಹಿರಂಗವಾಗಿಯೇ ಆ ಕೊಲೆ ನಡೆದಿದ್ದರೂ ಸಹ ಆರೋಪಿಗಳ ವಿರುದ್ಧ ಸಾಮಾನ್ಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಯಾವುದೇ ಸಾಕ್ಷಿಗಳ ಹೇಳಿಕೆ ಪಡೆದಿಲ್ಲ. ಪ್ರಕರಣವನ್ನು ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಕಾರಣ ಈಗಲೇ ತಮ್ಮ ನಿಲುವು ಬದಲಿಸಿ, ಸಾಮಾನ್ಯ ಪ್ರಕರಣದ ಬದಲಿಗೆ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಅವರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಪ್ರಕರಣ ಕುರಿತಂತೆ ಡಿವೈ ಎಸ್ಪಿ ಅವರನ್ನು ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡುತ್ತಿದ್ದು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸದೆ ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಕಾರಣ ಮೇಲಾಧಿಕಾರಿಗಳು ಅವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿದಾರರಿಗೆ ಕೊಲೆಗಡುಕರು ಬೆದರಿಕೆ ಒಡ್ಡುತ್ತಿದ್ದು ಭಯದಿಂದಾಗಿ ಅವರು ತಮ್ಮ ಮನೆಗಳನ್ನು ಖಾಲಿ ಮಾಡಿ ಬೇರೆಡೆ ಹೋಗಿದ್ದಾರೆ ಕಾರಣ ಕೊಲೆಗಡುಕರ ಮೊಬೈಲ್ ಕಾಲ್ ಡಿಟೇಲ್ಸ್ ಪಡೆದು ಆ ಮೂಲಕ ತನಿಖೆ ನಡೆಸಬೇಕು ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸಹ ಗಮನ ಹರಿಸಬೇಕೆಂದು ಮನವಿ ಮಾಡಿದರು
ದಲಿತ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿದ್ದ ಪರಮೇಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದು ಕೊಲೆಗಾರರ ಆಸ್ತಿಪಾಸ್ತಿಗಳನ್ನೂ ಮುಟ್ಟುಗೋಲು ಹಾಕುವುದಲ್ಲದೆ ಅವರನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಿ ಮುಂದಿನ ಕ್ರಮ ಜರುಗಿಸಬೇಕೆಂದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನು ಹದಿನೈದು ದಿನಗಳೊಳಗಾಗಿ ಅಟ್ರಾಸಿಟಿ ಆ್ಯಕ್ಟ್ ಪ್ರಕಾರ ಕೇಸು, ಮೂರು ತಿಂಗಳಲ್ಲಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಜತೆಗೆ ಮುಂಬರುವ 2ತಿಂಗಳೊಳಗಾಗಿ ಚಾರ್ಜ್ ಶೀಟ್ ಸಲ್ಲಿಸಬೇಕು ಇಲ್ಲವಾದಲ್ಲಿ ಪೊಲೀಸರ ವಿರುದ್ಧ ರಾಜ್ಯಾದಂತ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ್, ರಾಜಪ್ಪ ಪವಿತ್ರಗೌಡ, ಶಿವಲಿಂಗ ದೊಡ್ಡಮನಿ ಮೆಹಬೂಬಾ, ಡಾ.ಉಮೇಶ್, ಪ್ರತಾಪ್, ಮಲ್ಲೇಶ್ ಇತರರು ಹಾಜರಿದ್ದರು