ಆಗಸ್ಟ್ 20ರಂದು ರಾಜೀವ್ಗಾಂಧಿರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದೊಂದಿಗೆ ದಾವಣಗೆರೆ ಜಿಲ್ಲಾ ಎನ್.ಎಸ್.ಯು.ಐ ಘಟಕದ ವತಿಯಿಂದ ಆಗಸ್ಟ್ 20ರ ಶುಕ್ರವಾರದಂದು ಮಾಜಿ ಪ್ರಧಾನಿಗಳಾದ ದಿ|| ರಾಜೀವ್ಗಾಂಧಿರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10-30 ಗಂಟೆಗೆ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಜಿಲ್ಲಾ ಕಾಂಗ್ರೆಸ್ ಕಛೇರಿಯ ಎಸ್.ಎಸ್.ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಈ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮತ್ತು ಜಿಲ್ಲಾ ಎನ್.ಎಸ್.ಯು.ಐ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ಎಸ್ಯುಐ, ಸೇವಾದಳ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಅಲ್ಪಸಂಖ್ಯಾತರ ವಿಭಾಗ, ವೈದ್ಯಕೀಯ, ವಕೀಲರ ಘಟಕ, ಕಿಸಾನ್ ಘಟಕ, ಅಸಂಘಟಿತ ಕಾರ್ಮಿಕರ ಘಟಕ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮಹಾನಗರ ಪಾಲಿಕೆಯ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾಗೂ ಸಭೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಪಾಡಬೇಕು ಎಂದು ಅವರುಗಳು ಕೋರಿದ್ದಾರೆ.