ಬಿ. ಗುಣರಂಜನ್ ಶೆಟ್ಟಿ ಹತ್ಯೆಗೆ ಭೂಗತ ಲೋಕದವರ ಸಂಚು! ಸೂಕ್ತ ರಕ್ಷಣೆಗೆ ಮನವಿ
ದಾವಣಗೆರೆ: ಖ್ಯಾತ ಪರಿಸರವಾದಿ ಹಾಗೂ ನಮ್ಮ ಜಯಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್ ಸಂಸ್ಥೆ ಯುವ ಸಂಸ್ಥಾಪಕ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರ ಹತ್ಯೆಗೆ ಭೂಗತ ಪ್ರಪಂಚದ ಕೆಲ ವ್ಯಕ್ತಿಗಳ ತಂಡವೊ0ದು ಸಂಚು ರೂಪಿಸಿದ್ದು, ಈ ಕುರಿತು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಶಿಕ್ಷಣ, ರೈತರ, ಮಹಿಳೆಯರ, ಕಾರ್ಮಿಕರ, ದೀನದಲಿತರ ಪರವಾಗಿ ಕಳೆದ ಕೆಲವು ದಶಕಗಳಿಂದ ಚಳುವಳಿಗಳನ್ನು ರೂಪಿಸಿದ ಅಣುಭವಿಗಳ, ಬುದ್ದಿಜೀವಿಗಳ, ಪರಿಸರವಾದಿಗಳ, ಸಾಹಿತಿಗಳ, ಲೇಖಕರ, ಎಲ್ಲಾ ವರ್ಗದ ಹೋರಾಟಗಾರರ, ಸ್ವಾಭಿಮಾನಿ ಕಾರ್ಯಕರ್ತರ ಜೊತೆಯಲ್ಲಿ ಪರಿಸರವಾದಿಗಳು ಮತ್ತು ಯುವ ಸಂಸ್ಥಾಪಕ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿಯವರ ಸಾರಥ್ಯದಲ್ಲಿ ಜಯಕರ್ನಾಟಕ ಜನಪರ ವೇದಿಕೆ ಸ್ಥಾಪಿಸಲಾಯಿತು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಾರು ಕಾರ್ಯಕರ್ತರನ್ನು ಒಳಗೊಂಡಿರುವ ವೇದಿಕೆಯು ಹೊಸ ಹುರುಪು ಮತ್ತು ಹುಮ್ಮಸ್ಸಿನಿಂದ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬ ಆಲೋಚನೆಯೊಂದಿಗೆ ಪರಿಸರ ಸಂರಕ್ಷಣೆಯ ಮುಖ್ಯ ಉದ್ದೇಶದ ಜೊತೆಯಲ್ಲಿ ಸಂವಿಧಾನ ಮತ್ತು ಕಾನೂನು ಬದ್ದವಾಗಿ ಕರ್ನಾಟಕ ಸೇವಾ ಕೈಂಕರ್ಯದಲ್ಲಿ ಸಾಗುತ್ತಿದೆ.
ಇಂತಹ ಸಂದರ್ಭದಲ್ಲಿ ಬಿ. ಗುಣರಂಜನ್ ಶೆಟ್ಟಿಯವರ ಹತ್ಯೆಗೆ ಭೂಗತ ಪ್ರಪಂಚದ ಕೆಲ ವ್ಯಕ್ತಿಗಳ ತಂಡವೊ0ದು ಸಂಚು ರೂಪಿಸಿದ್ದು, ಸೂಕ್ತ ರಕ್ಷಣೆ ನೀಡಬೇಕಾಗಿದೆ ಎಂದು ಮನವಿ ಸಲ್ಲಿಸಿದರು.
garudavoice21@gmail.com 9740365719