ಸಿದ್ದರಾಮಯ್ಯ ಅಮೃತ ಮಹೋತ್ಸವದ ಹಿನ್ನೆಲೆ ಜು.18ರಂದು ಎಸ್ಸೆಸ್ಸೆಂರಿಂದ ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿಪೂಜೆ.

ದಾವಣಗೆರೆ: ಬರುವ ಆಗಸ್ಟ್ 3ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಾಳೆ ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.
ನಾಳೆ ಅಂದರೆ ಜುಲೈ 18ರಂದು ಮಧ್ಯಾಹ್ನ 12 ಗಂಟೆಗೆ ನಗರದ ಬೈಪಾಸ್ ರಸ್ತೆಯಲ್ಲಿರುವ ಶಾಮನೂರು ಅರಮನೆಯ ಮೈದಾನದಲ್ಲಿ ದಾವಣಗೆರೆ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಗುದ್ದಲಿಪೂಜೆ ನೇರವೇರಿಸುವ ಮೂಲಕ ಸಿದ್ದತಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ. ಮಂಜಪ್ಪ ಅಧ್ಯಕ್ಷತೆ ವಹಿಸುವರು.ದಾವಣಗೆರೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರುಗಳು ಭಾಗವಹಿಸಲಿದ್ದಾರೆ.
ಆದಕಾರಣ ಜಿಲ್ಲೆಯ ಮಹಾನಗರ ಪಾಲಿಕೆ,ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತಿ ಗಳ ಹಾಲಿ ಮತ್ತು ಮಾಜಿ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸುವಂತೆ ಅವರು ಕೋರಿದ್ದಾರೆ.