Bharath Bundh: ಭಾರತ್ ಬಂದ್ ಗೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ – ಶಿವಗಂಗಾ ಬಸವರಾಜ್

ದಾವಣಗೆರೆ: ಸಂಯುಕ್ತ ಕಿಸಾನ್ ಮೋರ್ಚಾ ಕರೆದಿರುವ ಭಾರತ್ ಬಂದ್ ಗೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷರಾದ ಬಸವರಾಜು ವಿ. ಶಿವಗಂಗಾ ತಿಳಿಸಿದ್ದಾರೆ.
ರೈತರಿಗೆ ಮರಣ ಶಾಸನವಾಗಿರುವ ಕೃಷಿ ಕಾಯಿದೆಗಳನ್ನು ರದ್ದು ಪಡಿಸಬೇಕು, ಅಡುಗೆ ಅನಿಲ, ಪೆಟ್ರೋಲ್- ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತಿತರೆ ಸಂಘಟನೆಗಳ ನೇತೃತ್ವದಲ್ಲಿ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಈ ಬಂದ್ ಯಶಸ್ವಿಗೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಸೇರಿದಂತೆ ಎಲ್ಲಾ ಸದಸ್ಯರು ಬಂದ್ಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.