bjp; ಬಿಜೆಪಿ ಸ್ವಂತ ಶಕ್ತಿ ಮೇಲೆ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ: ಶಾಸಕ
![](https://garudavoice.com/wp-content/uploads/2023/10/congress-2-1024x768.jpg)
ದಾವಣಗೆರೆ, ಅ.27: ರಾಜ್ಯದಲ್ಲಿ ಬಿಜೆಪಿ (BJP ) ಪಕ್ಷ ಸ್ವಂತ ಶಕ್ತಿಯ ಮೇರೆಗೆ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ಕಳೆದ ಭಾರಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆಯೇ ಹೊರತು ಸ್ವಂತ ಶಕ್ತಿಯಿಂದಲ್ಲ, ಈ ಬಾರಿಯೂ ಅದೇ ಸಂಚು ನಡೆಯುತ್ತಿದೆ ಎಂದು ತಿಳಿಸಿದರು.
Crackers; ಹೈಸ್ಕೂಲ್ ಮೈದಾನದಲ್ಲಿ ಪಟಾಕಿ ಮಾರಾಟ ನಿಷೇಧ – ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ
ಬಿಜೆಪಿ ಪಕ್ಷ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರಕ್ಕೆ ಬರುವುದು. ಸ್ವ-ಪ್ರಯತ್ನ ಎಂದಿಗೂ ಮಾಡಿಲ್ಲ. ಹಾಗೆಯೇ ಈ ಬಾರಿ ಕೆಲ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ದಿರುವುದು ಕೂಡ ನನ್ನ ಗಮನಕ್ಕೆ ಬಂದಿದೆ ಎಂದು ಮಾಹಿತಿ ನೀಡಿದರು.
ಇಲ್ಲಿಯವರೆಗೂ ಯಾವ ಬಿಜೆಪಿ ಕಾರ್ಯಕರ್ತರು ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಯಾರ ಆಮಿಷಕ್ಕೂ ಒಳಗಾಗುವುದಿಲ್ಲ. ಕಾಂಗ್ರೆಸ್ ಅಂದ್ರೆ ನಾನು, ಪಕ್ಷ ಅಂದ್ರೆ ನಾನು ಎಂಬುದಾಗಿ ತಿಳಿಸಿದರು.