ಲೋಕಲ್ ಸುದ್ದಿ

ಹಾಸನದಲ್ಲಿ‌ ಬಿಜೆಪಿ ಶಕ್ತಿ ಪ್ರದರ್ಶನ.. ಪ್ರೀತಂಗೌಡ ನಾಮಪತ್ರ ಸಲ್ಲಿಕೆ ವೇಳೆ ಜನಸಾಗರ

ಹಾಸನದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ..! ಪ್ರೀತಂಗೌಡ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜನಸಾಗರ

ಹಾಸನ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ನಾಮಪತ್ರಗಳ ಸಲ್ಲಿಕೆ ಭರಾಟೆ ಆರಂಭವಾಗಿದೆ.
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹುರಿಯಾಳಾಗಿ ಪ್ರೀತಂ ಗೌಡ ಮತ್ತೊಮ್ಮೆ ಕಣಕ್ಕಿಳಿದಿದ್ದಾರೆ. ಪುನರಾಯ್ಕೆ ಬಯಸಿ ಅವರು ನಾಮಪತ್ರ ಸಲ್ಲಿಸಿದ ಸನ್ನಿವೇಶ ಬಿಜೆಪಿಯ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ಹಾಸನದಲ್ಲಿ ಭಾರೀ ಜನಸಾಗರದ ನಡುವೆ, ಮೆರವಣಿಯಲ್ಲಿ ತೆರಳಿದ ಪ್ರೀತಂ ಗೌಡ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಹಾಸನ ಜಿಲ್ಲೆಯ ಅನೇಕ ಮುಖಂಡರು, ರಾಜ್ಯ ಬಿಜೆಪಿಯ ಪದಾಧಿಕಾರಿಗಳೂ ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!