ಬಿಜೆಪಿಯದ್ದು ಪಾಲಿಟಿಕ್ಸ್ ಅಲ್ಲ ಪಾರ್ಟಿಟಿಕ್ಸ್: ಪಾಲಿಕೆ ಕಾಂಗ್ರೆಸ್ ಸದಸ್ಯರ ಆರೋಪ

IMG-20210830-WA0028

ದಾವಣಗೆರೆ: ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿರ್ದೇಶಕರ ನೇಮಕ ವಿಚಾರದಲ್ಲಿ ಬಿಜೆಪಿ ‘ಪಾರ್ಟಿಟಿಕ್ಸ್’ ಮಾಡುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಈ ಹಿಂದೆ ಮೇಯರ್ ಆಗಿದ್ದ ಬಿ.ಜೆ. ಅಜಯ್ ಕುಮಾರ್ ಅವಧಿಯಲ್ಲಿ ಸಭೆ ನಡೆಸಿ ಬಿಜೆಪಿಯ ಇಬ್ಬರು ಮತ್ತು ಕಾಂಗ್ರೆಸ್ ನ ಇಬ್ಬರು ಸದಸ್ಯರನ್ನು ಸ್ಮಾರ್ಟ್ ಸಿಟಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಬಿಜೆಪಿಯ ಪಾಲಿಕೆ ಸದಸ್ಯರಾದ ಎಸ್. ಟಿ. ವೀರೇಶ್ ಹಾಗೂ ಸೋಗಿ ಶಾಂತಕುಮಾರ್, ಕಾಂಗ್ರೆಸ್ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಚಮನ್ ಸಾಬ್ ಹಾಗೂ ಹೆಸರನ್ನು ಆಯ್ಕೆ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆದರೆ, ಈಗ ಪಾಲಿಕೆಯ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಕೈಬಿಟ್ಟು ಬಿಜೆಪಿಯ ನಾಲ್ವರು ಸದಸ್ಯರನ್ನು ಸ್ಮಾರ್ಟ್ ಸಿಟಿ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಇದೇನು ಪಾಲಿಟಿಕ್ಸಾ ಅಥವಾ ಪಾರ್ಟಿಟಿಕ್ಸಾ ಎಂದು ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಹರಿಹಾಯ್ದು, ಪಾಲಿಕೆ ಮೇಯರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಮಹಾನಗರ ಪಾಲಿಕೆ ಆಯುಕ್ತರು ಮತ್ತು ಮೇಯರ್ ಎಸ್. ಟಿ. ವೀರೇಶ್ ಅವರು ಯಾವುದೇ ಸಭೆ ನಡೆಸದೇ, ಏಕಾಏಕಿಯಾಗಿ ಬಿಜೆಪಿ ಸದಸ್ಯರ ಹೆಸರನ್ನಷ್ಟೇ ಶಿಫಾರಸ್ಸು ಮಾಡಿರುವುದು ಖಂಡನೀಯ.

ಎಸ್.ಟಿ. ವೀರೇಶ್ ಅವರು ಈಗ ಮೇಯರ್ ಆಗಿದ್ದು, ಅವರ ಹೆಸರಿನ ಬದಲಿಗೆ ಬಿಜೆಪಿಯಿಂದ ಒಬ್ಬರನ್ನು ನೇಮಕ ಮಾಡುವುದನ್ನು ಬಿಟ್ಟು ಬಿಜೆಪಿಯ ನಾಲ್ವರನ್ನು ಆಯ್ಕೆ ಮಾಡಿ ಕಳುಹಿಸಿರುವ ಹಿಂದೆ ಯಾವುದೋ ಕಾಣದ ಕೈ ಕೆಲಸ‌ ಮಾಡಿರುವುದು ಸ್ಪಷ್ಟವಾಗಿದ್ದು, ಕೂಡಲೇ ನ್ಯಾಯ ಸಿಗಬೇಕು ಎಂಬುದಾಗಿ ಗಡಿಗುಡಾಳ್ ಮಂಜುನಾಥ್ ಮತ್ತು ಚಮನ್ ಸಾಬ್ ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!