ದಾವಣಗೆರೆ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂನ್‌ 14ರಂದು ರಕ್ತದಾನ ಶಿಬಿರ

ದಾವಣಗೆರೆ: ನಗರದ ನಿಟುವಳ್ಳಿಯಲ್ಲಿರುವ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂನ್ 14ರಂದು ದಾವಣಗೆರೆ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಆಡಳಿತ ಮಂಡಳಿ ನಿರ್ದೇಶಕಿ ಶೃತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಉದ್ಘಾಟನೆ ನೆರವೇರಿಸಲಿದ್ದಾರೆ. ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ತ್ಯಾಗರಾಜ, ಡಿಡಿಪಿಐ ತಿಪ್ಪೇಶಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್, ಪಾಲಿಕೆ ಸದಸ್ಯರಾದ ವೀರೇಶ್, ಗಣೇಶ್, ಉಮಾ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಅಷ್ಟೇಅಲ್ಲದೆ 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ನಿಂಚನ ಶಾಲೆಯ ಹೆಚ್.ಡಿ. ಹರ್ಷವರ್ಧನ್ ಜಿಲ್ಲೆಗೆ 2ನೇ ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದು, 625 ಅಂಕಗಳಿಗೆ 624 ಪಡೆದಿದ್ದಾನೆ. ಸುಶ್ಮಿತಾ 604, ಪಿ. ದೀಪಾ 602 ಅಂಕ ಗಳಿಸಿದ್ದಾರೆ. 14 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ 25 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಆರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಾಲೆ ಹಾಗೂ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಇವರಿಗೆ ಶಾಲೆ ಆಡಳಿತ ಮಂಡಳಿ ಅಭಿನಂದಿಸುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಲೆಯ ಪ್ರಾಂಶುಪಾಲರಾದ ನಸ್ರೀನಾ ಖಾನ್, ರೂಪಾ ಇದ್ದರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!