ಫೆ.10 ರಂದು ಬಿ.ಟಿ. ಜಾಹ್ನವಿ ಅವರ ಪುಸ್ತಕ ಬಿಡುಗಡೆ ಮತ್ತು ರಂಗ ಪ್ರಸ್ತುತಿ

ದಾವಣಗೆರೆ : ನಗರದ ಕುವೆಂಪು ಕನ್ನಡ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ ಸಮಗ್ರ ಕಥಾ ಸಂಕಲನ “ಒಬ್ರು ಸುದ್ಯಾಕೆ ಒಬ್ರು ಗದ್ಲಾö್ಯಕೆ” ಪುಸ್ತಕ ಬಿಡುಗಡೆ ಹಾಗೂ ಕೆ.ವಿ.ಅಕ್ಷರ, ಹೆಗ್ಗೋಡು ಇವರ ಮಾರ್ಗದರ್ಶನದಲ್ಲಿ ವಿದ್ಯಾ ಅಕ್ಷರ ಮತ್ತು ವಾಣಿ ಸತೀಶ್ ಇವರಿಂದ ‘ದೂಪ್ದಳ್ಳಿ ಸೆಕ್ಸಿ ದುರುಗ’ ರಂಗ ಪ್ರಸ್ತುತಿ ನಡೆಯಲಿದೆ.
ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸುವರು. ಮೈಸೂರಿನ ಸಾಹಿತಿ ಜಿ.ಪಿ.ಬಸವರಾಜು ಪುಸ್ತಕ ಬಿಡುಗಡೆ ಮಾಡಲಿದ್ದು, ತುಮಕೂರಿನ ಲೇಖಕರು ಹಾಗೂ ಪ್ರಾಧ್ಯಾಪಕ ಡಾ.ರವಿಕುಮಾರ ನೀಹ ಪುಸ್ತಕ ಕುರಿತು ಮಾತನಾಡಲಿದ್ದಾರೆ.
ಈ ವೇಳೆ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ ಉಪಸ್ಥಿತಿಯಲ್ಲಿ ಸಾಹಿತಿ ಮತ್ತು ಪ್ರಾಧ್ಯಾಪಕರಾದ ಸೌಮ್ಯ ಕೋಡೂರು, ಬೆಂಗಳೂರಿನ ಕೌದಿ ಪ್ರಕಾಶನದ ಡಾ.ಮಮತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Leave a Reply

Your email address will not be published. Required fields are marked *

error: Content is protected !!