ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ

bridge

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು ಕಾಲು ಜಖಂಗೊಂಡು ನರಳಾಡುತ್ತಿದ್ದ. ಸ್ಥಳೀಯರ ಸಹಾಯದಿಂದ ಸಿಲುಕಿಕೊಂಡ ಕಾರ್ಮಿಕನನ್ನು ಮೇಲಕ್ಕೆತ್ತಲಾಗಿದೆ. ತಕ್ಷಣವೇ ಗಂಭೀರ ಗಾಯಗೊಂಡ ಕಾರ್ಮಿಕರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಕಾರದ ಗುತ್ತಿಗೆ ಆಧಾರದ ಮೇಲೆ ಕೆಲಸದ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!