ವಿಕಲಚೇತನರ ಬಸ್‍ಪಾಸ್ ನವೀಕರಣ ಅರ್ಜಿಗೆ ಫೆ. 28 ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2022 ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ಜ.17 ರಿಂದ ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ನವೀಕರಣಕ್ಕೆ ಅರ್ಜಿ ಸಲ್ಲಿಸಲು ಫೆ. 28 ಕೊನೆಯ ದಿನವಾಗಿರುತ್ತದೆ.
ವಿಕಲಚೇತನರ ಬಸ್‍ಪಾಸ್ ನವೀಕರಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ https://serviceonline.gov.in.karnataka/ ನಲ್ಲಿ ಘಟಕ ವ್ಯವಸ್ಥಾಪಕರ ಕೌಂಟರ್ (ಐಡಿ) ಗೆ ಅರ್ಜಿ ಸಲ್ಲಿಸಬೇಕು ಮತ್ತು ಪಾಸ್‍ಗಳನ್ನು ಪಡೆದುಕೊಳ್ಳಲು ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕೌಂಟರ್ (ಐಡಿ) ಗೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಫಲಾನುಭವಿಗಳು ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದ್ದು ನಂತರ ಬಂದ ಅರ್ಜಿಗಳಿಗೆ ಅವಕಾಶ ಇರುವುದಿಲ್ಲ.
ಆನ್‍ಲೈನ್‍ನಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಅಂದರೆ ಯುಡಿಐಡಿ ಕಾರ್ಡ್, ಆಧಾರ್, ವಿಕಲಚೇತನರ ಪ್ರಮಾಣಪತ್ರ ಹಾಗೂ ಫೋಟೊ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. ಫಲಾನುಭವಿಗಳು ಆನ್‍ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್‍ಲೋಡ್ ಮಾಡಿದ್ದಾಗ್ಯೂ, ಭೌತಿಕವಾಗಿ ಪಾಸ್ ಪಡೆಯಲು ಬಂದಾಗ ಮೂಲ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ, ವಿಕಲಚೇತನರ (ಹೊಸ/ನವೀಕರಣ) ಪಾಸ್‍ಗಳನ್ನು ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!