ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಚಂದ್ರು ಬಸವಂತಪ್ಪ
ದಾವಣಗೆರೆ: ಕರ್ನಾಟಕ ಆಮ್ ಆದ್ಮಿ ಪಕ್ಷಕ್ಕೆ ನೂತನ ಜಿಲ್ಲಾ ಸಮಿತಿ ನೇಮಕ ಮಾಡಿ ಆದೇಶಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಚಂದ್ರು ಬಸವಂತಪ್ಪ ಅವರು, ತಮ್ಮನ್ನು ನೂತನ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಆರ್. ಅರುಣ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಆದಿಲ್ ಖಾನ್ ಎಸ್.ಕೆ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಿ.ಆರ್. ಅರುಣ್ ಕುಮಾರ್, ಆದಿಲ್ ಖಾನ್ ಎಸ್.ಕೆ., ಕೆ.ರವೀಂದ್ರ, ಕೆ.ಟಿ. ಕಲ್ಲೇಶ್, ವಿಕಾಸ್ ಕೆ.ಪಿ.ವಿ. ಉಪಸ್ಥಿತರಿದ್ದರು.