ದಾವಣಗೆರೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವ.

WhatsApp Image 2022-02-19 at 7.02.24 PM

ದಾವಣಗೆರೆ: ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಯಿ ಮಾಲತೇಶ್, ಶಿವಾಜಿ ಮಹಾರಾಜರು ಕೇವಲ ಒಂದು ಧರ್ಮಕ್ಕೆ ಸೀಮಿತವಲ್ಲದ ಮಹಾನಾಯಕ ಎಂದು ಅವರ ಸಂಘಟನ ಚಾತುರ್ಯ ಹಾಗೂ ಅವರ ಆಳ್ವಿಕೆಯ ಬಗ್ಗೆ ಬಣ್ಣಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಪಕ್ಷ ಸರ್ವ ಜಾತಿ ಹಾಗೂ ಸರ್ವ ಧರ್ಮಗಳ ಪಕ್ಷವಾಗಿದ್ದು, ನಮ್ಮ ಪಕ್ಷ ದೇಶಕ್ಕಾಗಿ ಹೋರಾಡಿದ ಎಲ್ಲಾ ನಾಯಕರುಗಳನ್ನು ಸ್ಮರಿಸುವ ಕಾರ್ಯಮಾಡುತ್ತದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜಿ. ಶಿವಕುಮಾರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ, ರಾಕೇಶ್ ಜಿ, ಸುರೇಶ್ ಜಾಧವ್ ಮಾತನಾಡಿದರು ಈ ಸಂದರ್ಭದಲ್ಲಿ ಲಿಯಾಕತ್ ಅಲಿ, ಬಾತಿ ಶಿವಕುಮಾರ್,
ಮೊಹಮದ್ ಜಿಕ್ರೀಯ,ಜಾನ್ ಅಲೆಕ್ಸಾಂಡರ್, ಮೊಹಮದ್ ಬಾಷಾ, ಹರೀಶ್ ಎಚ್, ಯುವರಾಜ್ ಮುಂತಾದವರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!