ಚಿತ್ರದುರ್ಗ: ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ! ಗೈರು ಹಾಜರಾದ 124 ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ

ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಪ್ರಕಟಿಸಿರುವ ಕುರಿತು ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಗ್ರಾಮ ಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಕವಿತಾ ಎಸ್. ಮನ್ನಿಕೇರಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಮೇ.9ರ 2022 ಹಾಗೂ ಮೇ. 10ರ 2022ರಂದು ಹಾಜರಾದ ಒಟ್ಟು 53 ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪಡೆಯಲಾಗಿದ್ದು, ಸದರಿ ದಿನಾಂಕಗಳ0ದು ಒಟ್ಟು 124 ಅಭ್ಯರ್ಥಿಗಳು ಗೈರು ಹಾಜರಾಗಿರುತ್ತಾರೆ. ಸದರಿ ದಿನಾಂಕಗಳ0ದು ಗೈರುಹಾಜರಾದ ಅಭ್ಯರ್ಥಿಗಳು ದಿನಾಂಕ 21-05-2022ರಂದು ಬೆಳಿಗ್ಗೆ 10 ಗಂಟೆಯಿ0ದ ಸಂಜೆ 5 ಗಂಟೆಯೊಳಗಾಗಿ ನೇಮಕಾತಿಗೆ ಸಂಬ0ಧಿಸಿದ ತಮ್ಮ ಮೂಲ ದಾಖಲಾತಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ, ಚಿತ್ರದುರ್ಗ ಇಲ್ಲಿ ಖುದ್ದು ಹಾಜರಾಗಿ ಸಲ್ಲಿಸಲು ಸೂಚಿಸಿ ಮತ್ತೊಮ್ಮೆ ಅಂತಿಮ ಅವಕಾಶ ನೀಡಲಾಗಿದೆ.
ಸದರಿ ದಿನಾಂಕದ0ದು ಮೂಲ ದಾಖಲಾತಿಗಳನ್ನು ಹಾಜರುಪಡಿಸಲು ವಿಫಲರಾದ ಅಭ್ಯರ್ಥಿಗಳನ್ನು ಯಾವುದೇ ಸೂಚನೆ ನೀಡದೇ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು ಹಾಗೂ ಈ ಸಂಬ0ಧ ಭವಿಷ್ಯದಲ್ಲಿ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂಬ ಅಂಶವನ್ನು ಸಹ ತಿಳಿಯಪಡಿಸಿದೆ.
ಅಂತಿಮ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ವೆಬ್ಸೈಟ್ hಣಣಠಿs://ಛಿhiಣಡಿಚಿಜuಡಿgಚಿ.ಟಿiಛಿ.iಟಿ/eಟಿ/ಟಿoಣiಛಿe_ಛಿಚಿಣegoಡಿಥಿ/ಡಿeಛಿಡಿuiಣmeಟಿಣ ನಲ್ಲಿ ಪರಿಶೀಲಿಸಬಹುದಾಗಿದೆ.