ಕೋವಿಡ್ ಸೋಂಕು ದೃಢಗೊಂಡ ನಡುವೆಯೂ ಸಭೆ ನಡೆಸಿದ ಸಿಎಂ ಬೊಮ್ಮಾಯಿ‌!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ಕ‌ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ಕರೆದೆ ಚರ್ಚೆ ನಡೆಸಿದ್ದಾರೆ.

ನಿನ್ನೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದ್ದ ಸಿಎಂ ಬಸವರಾಜ ಬೊಮ್ಮಾಯಿಯವರು, ಇಂದು ಓಲ್ಡ್ ಮದ್ರಾಸ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಸೌಮ್ಯ ಲಕ್ಷಣಗಳಿರೋ ಕಾರಣ, ಮನೆಯಲ್ಲಿಯೋ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುವಂತೆ ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ.

ಈ ಸಭೆಯಲ್ಲಿ ಮಹತ್ವದ ವಿಚಾರಗಳನ್ನು ಚರ್ಚಿಸಲಿರೋ ಅವರು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ 10 ದಿನ ಲಾಕ್ ಡೌನ್ ಜಾರಿಗೊಳಿಸಲಿದ್ದಾರೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!