ಸಿಎಂ ಬೊಮ್ಮಾಯಿ ಕುಟುಂಬದಿಂದ ಕಾವೇರಿ ತಾಯಿಗೆ ವಿಶೇಷ ಪೂಜೆ: ಸಿಎಂ ಗೆ ಸಚಿವರು ಸಾಥ್

IMG-20211007-WA0032

ಮೈಸೂರು: ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಚನ್ನಮ್ಮ ಜತೆ ಸಿಎಂ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜೆ ಸಲ್ಲಿಸಿದರು. ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿಗಳು ಪೂಜೆ ಸಲ್ಲಿಸಿದರು. ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಸುನಿಲ್ ಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇಂದು ಮುಂಜಾನೆ ತಾಯಿ ಚಾಮುಂಡೇಶ್ವರಿ ಅವರ ದರ್ಶನ ಪಡೆದರು. ನಾಡಹಬ್ಬ ದಸರಾ ಉದ್ಘಾಟನೆಗೂ ಮುನ್ನ ಬೊಮ್ಮಾಯಿ ಹಾಗೂ ಎಸ್ಸೆಂ ಕೃಷ್ಣ ಅವರು ದರ್ಶನ ಪಡೆದರು ಈ ಸಂದರ್ಭದಲ್ಲಿ ಸಚಿವರು ಶಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!