ರಾಜ್ಯ / ಕರ್ನಾಟಕ

CM: ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ: ಸಿಎಂ ಸಿದ್ದರಾಮಯ್ಯ ಕರೆ

Share
Share

CM: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50 ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಿಟ್ಟೂರಿನ ದೇವಸ್ಥಾನಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಬೀರಲಿಂಗೇಶ್ವರ ದೇವಸ್ಥಾನ ನಿಟ್ಟೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನೊಬ್ಬ ನಾಮ ಹಲವು ಎಂದು ಅರ್ಥೈಸಿಕೊಳ್ಳಬೇಕೆಂದರು.

*ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕು*

ನಮ್ಮ ನಾಡು, ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂದು ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ , ಕುವೆಂಪು ಬಯಸಿದ್ದರು. ಅದನ್ನೇ ನಮ್ಮ ಸರ್ಕಾರ ಪಾಲಿಸುತ್ತಿದೆ ಎಂದರು.

*ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕ*

ಕೇವಲ 13 ಕುರುಬರ ಕುಟುಂಬಗಳಿರುವ ಊರಿನಲ್ಲಿ ಬೀರಲಿಂಗೇಶ್ವರ ದೇವಾಲಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕವಾಗಿದೆ ಎಂದರು.

*ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ*

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಎಂಬ ವಿಚಾರಗಳು ಸಂವಿಧಾನದ ಆಧಾರ ಸ್ತಂಭಗಳು. ದೇವರ ಪೂಜೆ ಮಾಡಬೇಕು ಆದರೆ ಮೂಢ ನಂಬಿಕೆಗಳನ್ನು ಇಟ್ಟುಕೊಳ್ಳಬಾರದು. ಬಸವಣ್ಣ ಕರ್ಮಸಿದ್ಧಾಂತವನ್ನು ತಿರಸ್ಕರಿಸಿದ್ದರು ಎನ್ನಿವುದನ್ನು ಸ್ಮರಿಸಬೇಕು ಎಂದರು.

ಅಂಬೇಡ್ಕರ್ ಅವರು ದೇಶದ ಸ್ವಾತಂತ್ರ್ಯ ಸಮಾಜಿಕ, ಆರ್ಥಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ, ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದಿದ್ದರು. ಸಮಾನತೆಯ ಆಶಯದಿಂದಲೇ ಭಾಗ್ಯಗಳನ್ನು, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ಎಂದರು.

*ಪರಸ್ಪರರನ್ನು ಪ್ರೀತಿಸಿ*

ಇಸ್ಲಾಂ, ಹಿಂದೂ, ಕ್ರಿಶ್ಚಿಯನ್ ಧರ್ಮಗಳು ಜನರನ್ನು ಪ್ರೀತಿಸಬೇಕೆಂದು ಬೋಧಿಸುತ್ತವೆ. ಇದಾದಾಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ.‌
ಸೈದ್ಧಾಂತಿಕವಾಗಿ ನಮ್ಮ ವಿರೋಧಿಗಳಾದರೂ ಜನರನ್ನು ಪ್ರೀತಿಸಬೇಕು ಎಂದರು.

*ಕನಕದಾಸ, ಬಸವಣ್ಣನ ತತ್ವ ಅಳವಡಿಸಿಕೊಳ್ಳಬೇಕು*

ಕುಲದ ನೆಲೆಯನ್ನು ಬಲ್ಲಿರಾ ಎಂದ ಕನಕದಾಸರ ಹಾಗೂ ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುವುದು ನಮ್ಮ ಸಮಾಜದ ದುರಂತ ಎಂದರು.

ದಯೆ, ಕರುಣೆ, ಧರ್ಮದ ಮೂಲವಾಗಬೇಕು ಎಂಬ ಬಸವಣ್ಣನವರ ಮಾತುಗಳನ್ನು ಪಾಲಿಸಬೇಕು ಎಂದರು.

*ನಾನು ಬಸವಣ್ಣನ ಅನುಯಾಯಿ*

ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕೆನ್ನುವ ಉದ್ದೇಶ ಹೊಂದಿದ್ದು, ನಾನೂ ಕೂಡ ಬಸವಣ್ಣನ ಅನುಯಾಯಿ ಎಂದರು.

*ಅನುದಾನದ ಭರವಸೆ*

ಈ ಬಾರಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಸಲಾಗಿದೆ. ರಾಣೆಬೆನ್ನೂರಿನ ವರ್ತುಲ ರಸ್ತೆ ಹಾಗೂ ಸಮುದಾಯ ಭವನಕ್ಕೆ ಅನುದಾನ ನೀಡುವ ಭರವಸೆ ನೀಡಿದರು.

ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ್, ಪ್ರಕಾಶ್ ಕೋಳಿವಾಡ, ಯಾಸಿರ್ ಖಾನ್ ಪಠಾಣ್, ಯು. ಬಿ.ಬಣಕಾರ್ , ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮೊದಲಾದವರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Hara: ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಚಾಟನೆ – ಏಪ್ರಿಲ್ 27ಕ್ಕೆ ಬಹಿರಂಗ ಲೆಕ್ಕಕ್ಕೆ ಟ್ರಸ್ಟ್ ಸಿದ್ಧ

ದಾವಣಗೆರೆ:(Hara) ಹರಿಹರದ ಪಂಚಮಸಾಲಿ ಪೀಠದಲ್ಲಿ ಉಂಟಾಗಿರುವ ಭಿನ್ನಮತ ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿದೆ. ಮಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಅವರು ಹರಿಹರ ಪೀಠದ...

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

Related Articles
ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ...

ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ಅಪರಾಧರಾಜ್ಯ / ಕರ್ನಾಟಕ

Gambling: ಅಕ್ರಮ ಇಸ್ಪೀಟ್‌, ಓಸಿ ದಂಧೆಗೆ ಪೊಲೀಸರ ಬ್ರೇಕ್: ಜೂಜುಕೋರರ ಹೆಡೆಮುರಿ ಕಟ್ಟಲು ಖಾಕಿ ಪಡೆ ಸಜ್ಜು

ಬೆಂಗಳೂರು: (Gambling)  ರಾಜ್ಯಾದ್ಯಂತ ಅಕ್ರಮ ಇಸ್ಪೀಟ್ (ಅಂದರ್-ಬಾಹರ್) ಮತ್ತು ಓಸಿ (ಒನ್ ಚಾನ್ಸ್/ಮಟ್ಕಾ) ಜೂಜಾಟಗಳ ಹಾವಳಿ...