ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‍ಗೆ ಅನುಮತಿ, ಖಂಡಿಸಿ ಆಗಸ್ಟ್ 19ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

IMG-20240815-WA0006

ದಾವಣಗೆರೆ: ಮಾನ್ಯ ಮುಖ್ಯಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲರ ಪ್ರಜಾಪ್ರಭುತ್ವ- ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ದಿನಾಂಕ: 19-08-2024ರ ಸೋಮವಾರದಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ರಾಜ್ಯಪಾಲರ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 19 ರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಅಂಬೇಡ್ಕರ್ ಸರ್ಕಲ್‍ನಲ್ಲಿರುವ ಡಾ|| ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಜಯದೇವ ವೃತ್ತ ನಂತರ ಮಹಾತ್ಮಗಾಂಧಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ದಾವಣಗೆರೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಪಿಎಂಸಿ ಮಾಜಿ ಸದಸ್ಯರುಗಳು, ಜಿಲ್ಲೆಯ ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ದಾವಣಗೆರೆ ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರು, ಡಿಸಿಸಿ ಬ್ಯಾಂಕ್ ಸದಸ್ಯರುಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ದಾವಣಗೆರೆ ಜಿಲ್ಲೆಯ ಅಹಿಂದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅನಿತಾಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಜಿ.ಸಿ.ನಿಂಗಪ್ಪ ಹದಡಿ, ಬಿ.ಕೆ.ಪರಶುರಾಮ್ ಮಾಗಾನಹಳ್ಳಿ ಅವರುಗಳು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!