ಕುಕ್ಕರ್ ಬಾಂಬ್ ಸ್ಪೋಟ: ಸಂತ್ರಸ್ತ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆ
![](https://garudavoice.com/wp-content/uploads/2023/01/mangalore-cocker-blast-pujari-768x1024.jpg)
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಉಜ್ಜೋಡಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಶನಿವಾರ ಫಾದರ್ ಮುಲ್ಲರ್ಸ್ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.ನಗರದ ಗರೋಡಿ ಬಳಿ 2022ರ ನ.19ರಂದು ಸ್ಫೋಟ ನಡೆದ ದಿನವೇ ಅವರನ್ನು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟದಿಂದ ಅವರ ದೇಹದ ಶೇ 30ಕ್ಕೂ ಹೆಚ್ಚು ಭಾಗ ಸುಟ್ಟಿತ್ತು. ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಈಚೆಗಷ್ಟೇ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು.
ಪುರುಷೋತ್ತಮ ಪೂಜಾರಿ ಆಟೊ ರಿಕ್ಷಾದಲ್ಲಿ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಪ್ರಯಾಣಿಸುವಾಗ ಗರೋಡಿ ಬಳಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಬಳಿಕ ಗಾಯಗೊಂಡ ಇಬ್ಬರನ್ನು ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಶಾರಿಕ್ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 2022ರ ಡಿ. 17ರಂದು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.