ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

Share
Share

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು.

ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು.

ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ರಾಜಕೀಯ

MLA: ಜಮೀರಣ್ಣ ಕೆಪಾಸಿಟಿ ಇರುವ ನಾಯಕ: ಟೀಕಾಕಾರರಿಗೆ ಮತ್ತು ಅಬ್ದುಲ್ ಜಬ್ಬಾರ್‌ಗೆ ಶಾಸಕ ಶಿವಗಂಗಾ ಟಾಂಗ್

ದಾವಣಗೆರೆ: (MLA) "ಮಗು ಅತ್ತರೆ ಮಾತ್ರ ತಾಯಿ ಹಾಲು ಕೊಡಲು ಸಾಧ್ಯ, ಅದೇ ರೀತಿ ನಮ್ಮ ನಾಯಕರು ಸಚಿವ ಸ್ಥಾನ ಕೇಳಿದರೆ ಮಾತ್ರ ನೀಡಲು ಸಾಧ್ಯ. ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು...

Siddu is the country's number one honest prophet: Minister Bairathi Suresh
ದಾವಣಗೆರೆ

Siddu; ಸಿದ್ದು ದೇಶದ ನಂಬರ್ ಒನ್ ಪ್ರಾಮಾಣಿಕ ಮುತ್ಸದ್ದಿ: ಸಚಿವ ಬೈರತಿ ಸುರೇಶ್ ಬಣ್ಣನೆ

ಹರಿಹರ: (Siddu) ದೇಶದ ಅತ್ಯಂತ ಪ್ರಾಮಾಣಿಕ ರಾಜಕಾರಣಿಗಳ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಸ್ಥಾನದಲ್ಲಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಬಣ್ಣಿಸಿದ್ದಾರೆ. ಹರಿಹರದ ಬೆಳ್ಳೂಡಿ ಗ್ರಾಮದ...

Related Articles
ದಾವಣಗೆರೆಅಪರಾಧ

PDS RICE: 6.14 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ಮತ್ತು ರಾಗಿ ವಶ; ಪೊಲೀಸರ ಭರ್ಜರಿ ಕಾರ್ಯಾಚರಣೆ

ದಾವಣಗೆರೆ:(PDS RICE) ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ಸಾಗಿಸುತ್ತಿದ್ದ ಜಾಲವನ್ನು...

ದಾವಣಗೆರೆಅಪರಾಧ

PDS: ಅಕ್ರಮ ಪಡಿತರ ಅಕ್ಕಿ, ರಾಗಿ ಸಾಗಾಟ ಪತ್ತೆ – ಆಹಾರ ಇಲಾಖೆ ಅಧಿಕಾರಿಗಳಿಂದ ಲಾರಿ ವಶ, ಪರಿಶೀಲನೆ

ದಾವಣಗೆರೆ:(PDS) ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು,...

ದಾವಣಗೆರೆ

Chess: ಡಿಕೆಎಸ್ ಕಪ್ ಚದುರಂಗ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡದ ಪ್ರಹ್ಲಾದ್ ಸೇನ್ ಪ್ರಥಮ ಸ್ಥಾನ 

ದಾವಣಗೆರೆ:(Chess) ದಾವಣಗೆರೆ ಜಿಲ್ಲಾ ಅಸೋಸಿಯೇಷನ್ ವತಿಯಿಂದ ಡಾ. ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥವಾಗಿ ಮೊದಲ ಬಾರಿಗೆ ಹಾಗೂ...

ದಾವಣಗೆರೆ

Samarth: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಾನವನ ಹೆಚ್ಚಿಸಲು ಸಮರ್ಥ್ ಶ್ಯಾಮನೂರು ಮಲ್ಲಿಕಾರ್ಜುನ್ ಸೂಚನೆ

ದಾವಣಗೆರೆ: (Samarth) ದಾವಣಗೆರೆ ದಕ್ಷಿಣ ಕ್ಚೇತ್ರದಲ್ಲಿ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸುವ ಜೊತೆಗೆ ಜನಪ್ರತಿನಿಧಿಗಳಿಗೆ ಮನವರಿಕೆ ಆಗುವಂತೆ...