Corporation: ಪಾಲಿಕೆಯಲ್ಲಿ ಮೈತ್ರಿ ಬಗ್ಗೆ ಹೇಳುವಷ್ಟು ದೊಡ್ಡವನು ನಾನಲ್ಲ – ಶಾಸಕ ಎಂಪಿ ರೇಣುಕಾಚಾರ್ಯ

IMG-20210912-WA0001

 

ದಾವಣಗೆರೆ: ಮೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿದ್ದು, ಮೈತ್ರಿ ಬಗ್ಗೆ ಹೇಳುವಷ್ಟು ದೊಡ್ಡವನು ನಾನಲ್ಲ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಹಾಗೂ ಜಿಲ್ಲಾ ಉಸ್ತುವಾರಿಗಳು ನಿರ್ಣಯ ಮಾಡುತ್ತಾರೆ. ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಯಾವುದೇ ಕಾರಣಕ್ಕೂ ಮಾತಾಡುವುದಿಲ್ಲ ಎಂದರು.

ನಿರಾಣಿಯವರು ಹೇಳಿದ್ದಾರೆ ಬಿಜೆಪಿಯವರೇ ಮೇಯರ್ ಆಗ್ತಾರೆ ಎಂದು.ಕಾಂಗ್ರೆಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರು ನಾನು ಮಾತನಾಡುವುದಿಲ್ಲ. ರಾಜ್ಯ ಕೇಂದ್ರದಲ್ಲಿ ನಮ್ಮದೆ ಸರ್ಕಾರ ಇದೆ. ಮೈತ್ರಿ ಬಗ್ಗೆ ಮಾತಾಡುವುದಿಲ್ಲ ಎಂದು ಹೇಳಿದರು.

ಶ್ರೀಮಂತ್ ಪಾಟೀಲ್ ಬಿಜೆಪಿ ಸೇರಲು ಹಣದ ಆಫರ್ ಕೊಟ್ಟಿದ್ದರು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಜೆಡಿಎಸ್ ಶಾಸಕರು ಯಡಿಯೂರಪ್ಪ ನವರು ನಾಯಕತ್ವ ನಂಬಿ ಬಂದಿದ್ದಾರೆ ಎಂದರು.

ಅಮಿತ್ ಷಾ ಬಂದಾಗ ನಾವೇಲ್ಲರೂ ಸ್ವಾಗತ ಮಾಡಿದೆವು. ಆ ಸಂದರ್ಭದಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ಆಗಿಲ್ಲ. ಜಿಲ್ಲೆಯಲ್ಲಿ ಐದು ಜನ ಶಾಸಕರಿದ್ದು, ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮೊದಲಿನಿಂದಲೂ ಕೇಳಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!