ಕೋವಿಡ್ ಅಲೆಗಳಿಂದ ಸಂಕಷ್ಟಕ್ಕೊಳಗಾಗಿರುವ ಕಟ್ಟಡ ಕಾರ್ಮಿಕರಿಗೆ ಸರ್ಕಾರಗಳು ಸ್ಪಂದಿಸಬೇಕು: ಶಾಸಕ ಶಾಮನೂರು ಶಿವಶಂಕರಪ್ಪ

IMG-20210803-WA0008

ದಾವಣಗೆರೆ: ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವಂತಹವರು ಅಂತಹವರ ಸಂಕಷ್ಟಕ್ಕೆ ಸರ್ಕಾರಗಳು ಶೀಘ್ರ ಸ್ಪಂದಿಸುವಂತಾಗಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.

ಮಂಗಳವಾರ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡಲಾಗಿರುವ ಪುಡ್‌ಕಿಟ್‌ಗಳನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ವಿತರಿಸಿ ಅವರು ಮಾತನಾಡಿದರು.

ಕರೋನಾ ಒಂದು ಮತ್ತು ಎರಡನೇ ಅಲೆ ವೇಳೆ ಕಟ್ಟಡ ಕಾರ್ಮಿಕರು ಸೇರಿದಂತೆ ಅನೇಕ ವೃತ್ತಿಪರ ಜನರಿಗೆ ಸಾಕಷ್ಟು ತೊಂದರೆ ಆಯಿತು. ಇದಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಆದರೆ, ಸರ್ಕಾರ ಬಹುದಿನಗಳ ನಂತರ ಸ್ಪಂದಿಸಿದೆ. ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೀಗ ಕರೋನಾ ಮೂರನೇ ಅಲೆ ಆರಂಭವಾಗುವ ಮುನ್ಸೂಚನೆ ಇದ್ದು, ರಾಜ್ಯ ಸರ್ಕಾರ ಕ್ಯಾಬಿನೆಟ್ ರಚನೆಯಲ್ಲಿಯೇ ಮುಳುಗಿದ್ದು, ಬಡವರಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯರುಗಳಾದ ಎ.ಬಿ.ರಹೀಂ, ಕೆ.ಚಮನ್‌ಸಾಬ್, ಜಾಕೀರ್‌ಅಲಿ, ಶಫೀಕ್ ಪಂಡಿತ್, ಉಮಾಶಂಕರ್, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ವೀಣಾ ಎಸ್.ಆರ್. ಇಬ್ರಾಹಿಂ ಸಾಬ್, ರಾಜಶೇಖರ್ ಹಿರೇಮಠ್, ಮಂಜು, ಮಧು, ಮುಖಂಡರುಗಳಾದ ಹಾಲಸ್ವಾಮಿ, ಕರಿಬಸಪ್ಪ, ಅಬ್ದುಲ್ ಜಬ್ಬಾರ್, ವಾಸೀಮ್ ಚಾರ್ಲಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!