ಬೆಲೆ ಏರಿಕೆ ಬಿಸಿ ನಡುವೆ ಜನತೆಗೆ ಕರೆಂಟ್ ಶಾಕ್! ಪರಿಷ್ಕೃತ ವಿದ್ಯುತ್ ದರ ಜಾರಿ,

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಆಘಾತ ಉಂಟಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿಯು ನಾಡಿನ ಜನತೆಗೆ ಶಾಕ್ ನೀಡಿದೆ. ಬೆಸ್ಕಾಂ ಪರಿಷ್ಕೃತ ದರದಲ್ಲಿ ಏರಿಕೆ ಮಾಡಲಾಗಿದ್ದು, ಏ.1ರಿಂದಲೇ ಈ ಪರಿಷ್ಕೃತ ದರ ಜಾರಿಯಾಗಿದೆ. ವಸಂತನನಗರದ ಕೆಇಆರ್‌ಸಿ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಕೆಇಆರ್‌ಸಿ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಏ.1ರಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಪ್ರತಿ ಯೂನಿಟ್‌ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ದರ ಏರಿಕೆ ಮಾಡಲಾಗಿದೆ. ಕಳೆದ ವರ್ಷವೂ ದರವನ್ನು ಹೆಚ್ಚಳ ಮಾಡಲಾಗಿತ್ತು ಎಂದು ತಿಳಿಸಿದರು. ದೇಶಾದ್ಯಂತ ಇಂಧನ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಈ ಮಧ್ಯೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿಯು ನಾಡಿನ ಜನತೆಗೆ ಶಾಕ್ ನೀಡಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!