ಡಿ. 30 ರಿಂದ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಪರೀಕ್ಷೆ ನಡೆಯಲಿದೆ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೨-೨೩ನೇ ಸಾಲಿನ ಸಾಹಿತ್ಯ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಏಕ ಕಾಲದಲ್ಲಿ ರಾಜ್ಯದ ವಿವಿಧ ೧೮ ಪರೀಕ್ಷಾ ಕೇಂದ್ರಗಳಲ್ಲಿ ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಇದೇ ಡಿಸೆಂಬರ್ ೩೦, ೩೧ ಮತ್ತು ೨೦೨೩ನೇ ಜನವರಿ ೦೧ ರಂದು ಒಟ್ಟು ೩ ದಿನಗಳ ಕಾಲ ರಾಜ್ಯದ ೧೮ ಕೇಂದ್ರಗಳಲ್ಲಿ ನಡೆಯಲಿದೆ. ದಾವಣಗೆರೆಯಲ್ಲಿ ಪರೀಕ್ಷೆಯು ಶ್ರೀ ತರಳಬಾಳು ಜಗದ್ಗುರು ಸಂಯುಕ್ತ ಪದವಿಪೂರ್ವ ಕಾಲೇಜು, ಅನುಭವ ಮಂಟಪದಲ್ಲಿ ನಡೆಯಲಿದೆ. ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳಿಗೆ ಡಿಸೆಂಬರ್ ೨೦ರ ನಂತರವೂ ಪ್ರವೇಶ ಪತ್ರ ಹಾಗೂ ವೇಳಾಪಟ್ಟಿ ತಲುಪದಿದ್ದ ಪಕ್ಷದಲ್ಲಿ ಅಂಥಹ ಅಭ್ಯರ್ಥಿಗಳು, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮, ಇವರಲ್ಲಿ ವಿಚಾರಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೦-೨೬೬೨೩೫೮೪ / ೨೬೬೧೨೯೯೧ ಹಾಗೂ ಮೊ. ೮೬೬೦೭೭೭೬೪೩ / ೯೭೩೯೬೬೬೮೩೪. ಅಂತರ್ಜಾಲ ತಾಣ www.kasapa.in ಮೂಲಕ ಸಹ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ