Dar fir: ಗುಂಡು ತಗುಲಿ ಪೇದೆ ಸಾವು ಪ್ರಕರಣ: ಡಿಎಆರ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು

ದಾವಣಗೆರೆ: ಆಕಸ್ಮಿಕವಾಗಿ ಬಂದೂಕಿನಿಂದ ಹಾರಿದ ಗುಂಡು ತಗುಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ ಸ್ಟೇಬಲ್ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಆರ್ ಸಿಬ್ಬಂದಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ ಜಿಲ್ಲಾ ಮೀಸಲು ಪಡೆಯ ಶಸ್ತ್ರಾಗಾರದಲ್ಲಿ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ್ದ ಗುಂಡು ಎಪಿಸಿ ಚೇತನ್ ರ ಕುತ್ತಿಗೆಗೆ ತಗುಲಿದ ಪರಿಣಾಮ ಚೇತನ್ ಸಾವುಕಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಆರ್ ಶಸ್ತ್ರಾಸ್ತ್ರಗಾರ ಸಿಬ್ಬಂದಿ ಶ್ರೀನಿವಾಸ್ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.