ದಾವಣಗೆರೆ ಪಿಜೆ ಬಡಾವಣೆಯಲ್ಲಿ ವೇಶ್ಯಾವಾಟಿಕೆ: ಮೂವರ ರಕ್ಷಣೆ

ವೇಶ್ಯಾವಾಟಿಕೆ

ದಾವಣಗೆರೆ: ನಗರದ ಶ್ರೀಮಂತರು, ವಿದ್ಯಾವಂತರೇ ಹೆಚ್ಚಾಗಿ ವಾಸಿಸುತ್ತಿರುವ ಪ್ರಿನ್ಸ್ ಜಯಚಾಮರಾಜೇಂದ್ರ ಬಡಾವಣೆಯಲ್ಲಿ ದೇಹ ಮಾರಿಕೊಳ್ಳುವ ದಂಧೆ ಬೆಳಕಿಗೆ ಬಂದಿದೆ.

ಹೌದು, ಇಲ್ಲಿನ ಪಿ.ಜೆ. ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಯುವತಿ ಸೇರಿ ಮೂವರನ್ನು ರಕ್ಷಿಸಿದ್ದಾರೆ.

ಉಮಾಪತಿ ಎಂಬುವವರಿಗೆ ಸೇರಿದ ಮನೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ಬಾಡಿಗೆಯ ಮನೆಯೊಂದರಲ್ಲಿ ಹೆಣ್ಣು ಮಕ್ಕಳನ್ನು ಹಣದ ಆಮಿಷ ಒಡ್ಡಿ ಬೇರೆ ಕಡೆಯಿಂದ ಕರೆಯಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಮಾಹಿತಿ ಆಧರಿಸಿ ದಾವಣಗೆರೆ ಹಾಗೂ ಹರಪನಹಳ್ಳಿಯ ಮೂವರು ಮಹಿಳೆಯರು ಹಾಗೂ ಬೆಳಗಾವಿಯ ಒಬ್ಬರು ಯುವತಿಯನ್ನು ರಕ್ಷಿಸಲಾಗಿದೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಹರಪನಹಳ್ಳಿ ತಾಲ್ಲೂಕಿನ ಗಂಗಿಬಾಯಿ ಎಂಬುವರ ವಿರುದ್ಧ ಇಲ್ಲಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!