ದಾವಣಗೆರೆಯಲ್ಲಿ ಮೊಬೈಲ್ ಸ್ಥಾವರದಲ್ಲಿ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ಪರಿಕರಗಳು ಬೆಂಕಿಗಾಹುತಿ

ದಾವಣಗೆರೆ: ದಾವಣಗೆರೆಯಲ್ಲಿ ಬೆಳ್ಳಂ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ದಾವಣಗೆರೆಯ
ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್
ಹಿಂಭಾಗದಲ್ಲಿರುವ ಮೊಬೈಲ್ ಸ್ಥಾವರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಮೊಬೈಲ್ ಸ್ಥವರಕ್ಕೆ ಅಳವಡಿಸಲಾಗಿದ್ದ, ಬ್ಯಾಟರಿ, ಜನರೇಟರ್, ಕೇಬಲ್ ಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು, ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಸಕಾಲಕ್ಕೆ ಆಗಮಿಸಿದ ಆಗ್ನಿಶಾಮಕ ದಳದ ಸಿಬ್ಬಂದಿ,
ಕಾರ್ಯಾಚರಣೆ ನಡೆಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತು ಅಕ್ಕಪಕ್ಕದಲ್ಲಿ ಹೊಟೆಲ್ ಹಾಗೂ ವಾಣಿಜ್ಯ ಕಟ್ಟಡಗಳು ಇದ್ದು, ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಆದರೆ, ಅಗ್ನಿ ಶಾಮಕ ಸಿಬ್ಬಂದಿಯ ಕಾರ್ಯಾಚರಣೆಯಿಂದಾಗಿ ಅನಾಹುತ ತಪ್ಪಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆ
ಅಕ್ಕಪಕ್ಕ ಕಟ್ಟಡಗಳಿಗೂ . ವ್ಯಾಪಿಸುವ ಮುನ್ನ, ಸಕಾಲಕ್ಕೆಸರಿಯಾಗಿ ಅಗ್ನಿ ಶಾಮಕ ಸಿಬ್ವಂದಿ ಆಗಮಿಸಿದ್ದರಿಂದ ಅನಾಹುತ ತಪ್ಪಿದೆ.