ದಾವಣಗೆರೆ : ಅಶೋಕ ರಸ್ತೆ ತ್ವರಿತವಾಗಿ ಸರಿಪಡಿಸಲು ಸೂಚನೆ

ದಾವಣಗೆರೆ : ದಾವಣಗೆರೆ ನಗರದ ಅಶೋಕ ಟಾಕೀಸ್ ರಸ್ತೆಯನ್ನು ಆದಷ್ಟು ಬೇಗ ಸರಿಪಡಿಸಬೇಕು ಎಂದು ನಿಕಟಪೂರ್ವ ಮಹಾಪೌರರಾದ ಎಸ್. ಟಿ. ವೀರೇಶ್ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದರು. ಮಹಾ ಶಿವರಾತ್ರಿಗೆ ದಿನಗಣನೆ ಆರಂಭವಾಗಿದ್ದು, ಶಿವರಾತ್ರಿ ಪ್ರಯುಕ್ತ ಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಕ್ತಾದಿಗಳು ಬರಲು ಮತ್ತು ಹೋಗಲು ತೊಂದರೆ ಆಗುತ್ತದೆ. ಹಾಗಾಗಿ ಆದಷ್ಟು ಬೇಗ ಈ ರಸ್ತೆ ದುರಸ್ಥಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.