ದಾವಣಗೆರೆ ಮಹಾನಗರ ಪಾಲಿಕೆ! ಪೌರಕಾರ್ಮಿಕರಿಗೆ ಬೀಳ್ಕೊಡುಗೆ

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಅನೇಕ ವರ್ಷಗಳಿಂದ ಪೌರ ಕಾರ್ಮಿಕರಾಗಿ ದಾವಣಗೆರೆ ನಗರ ಸ್ವಚ್ಛತೆಯ ಕಾರ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿರುವ ಪೌರಕಾರ್ಮಿಕರಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಪೌರಕಾರ್ಮಿಕರಿಗೆ ಕಾರ್ಮಿಕರಿಗೆ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ ಸನ್ಮಾನಿಸಿ ಗೌರವಿಸಿದರು ಹಾಗೂ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ರಾಜ್ಯ ಕಾರ್ಯಾಧ್ಯಕ್ಷ ಎಲ್.ಎಂ ಹನುಮಂತಪ್ಪ ಹಾಗೂ ಮಹಾನಗರ ಪಾಲಿಕೆ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಕೆ.ಎಸ್ ಗೋವಿಂದರಾಜು, ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ನೀಲಗಿರಿಯಪ್ಪ, ಬಿ. ಲೋಹಿತ್, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿ ಸಂತೋಷ್, ಮಹಾನಗರ ಪಾಲಿಕೆಯಿಂದ ವರ್ಗಾವಣೆ ಆಗಿರುವುದರಿಂದ ಅವರಿಗೂ ಸಹ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಹಾನಗರ ಪಾಲಿಕೆ ಸಿಬ್ಬಂದಿ ವರ್ಗ ಪೌರಕಾರ್ಮಿಕರ ಸಂಬ0ಧಿಕರು ಹಾಗೂ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
garudavoice21@gmail.com 9740365719