ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ಖಂಡಿಸಿ  ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಸಚಿವ ಅಶ್ವತ್ಥ್ ನಾರಾಯಣ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಕೆ ನೀಡಿದ ಸಚಿವ ಡಾ.ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿತು.

ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಮಂಜಪ್ಪ, ಟಿಪ್ಪುವಿನಂತೆ ಸಿದ್ಧರಾಮಯ್ಯ ಅವರನ್ನೂ ಮೇಲಕ್ಕೆ ಕಳುಹಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಅಶ್ವತ್ಥ ನಾರಾಯಣ ತಮ್ಮ ಕೊಳಕು ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಧರ್ಮಗಳ ನಡುವೆ, ಸಮಾಜಗಳ ನಡುವೆ ಅಶಾಂತಿ ಮೂಡಿಸುವಂತಹ ಹೇಳಿಕೆ ನೀಡಿರುವ ಅವರನ್ನು ಕೂಡಲೇ ಬಂಧಿಸಬೇಕು. ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್, ಮುಖಂಡರುಗಳಾಗ ಕೆ.ಜಿ. ಶಿವಕುಮಾರ್, ಎಸ್. ಮಲ್ಲಿಕಾರ್ಜುನ, ಎ.ನಾಗರಾಜ್, ಹರೀಶ್ ಬಸಾಪುರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!